ಭಟ್ಕಳದಲ್ಲಿ ಆಸ್ತಿ ಜಗಳ ; ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ನಿಕಟ ಸಂಬಂಧಿ ! 

24-02-23 09:05 pm       HK News Desk   ಕ್ರೈಂ

ಆಸ್ತಿ ವಿಚಾರಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಘಟನೆ ಭಟ್ಕಳ ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದಿದೆ. 

ಕಾರವಾರ, ಫೆ.24 : ಆಸ್ತಿ ವಿಚಾರಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಘಟನೆ ಭಟ್ಕಳ ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದಿದೆ. 

ಶಂಭು ಹೆಗಡೆ (75), ಅವರ ಪತ್ನಿ ಮಾದೇವಿ ಹೆಗಡೆ (45), ದಂಪತಿಯ ಮಗ ರಾಜೀವ್ ಹೆಗಡೆ (34) ಹಾಗೂ ಇವರ ಸೊಸೆ ಕುಸುಮಾ ಭಟ್(30) ಕೊಲೆಯಾದವರು. ನಾಲ್ಕು ವರ್ಷದ ಮಗು ಮನೆಯಲ್ಲಿ ಮಲಗಿದ್ದರೆ, ಹತ್ತು ವರ್ಷದ ಬಾಲಕ ಪಕ್ಕದ ಮನೆಯಲ್ಲಿದ್ದ ಕಾರಣ  ಕೊಲೆಗಡುಕರಿಂದ ಪಾರಾಗಿದ್ದಾರೆ. 

ಇದೇ ಕುಟುಂಬದ ಸಂಬಂಧಿ ವಿನಯ ಶ್ರೀಧರ ಭಟ್ ಕತ್ತಿಯಿಂದ ಹಲ್ಲೆ ಮಾಡಿ ಈ ಕೃತ್ಯ ಎಸಗಿದ್ದಾನೆ. ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್  ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಸಾವಿನ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದ ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿಕೊಂಡಿದ್ದರು. ಮಾತುಕತೆ ನಂತರ ಕೊಲೆಯಾದ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಇದೇ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ವಿದ್ಯಾಳ ಸಹೋದರ ಹಲ್ಯಾಣಿ ನಿವಾಸಿ ವಿನಯ ಶ್ರೀಧರ ಭಟ್ ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೊಲೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

Four members of a family were stabbed to death at Hadavalli in Bhatkal taluk on Friday. The deceased have been identified as Shambu Bhat (65), his second wife Mahadevi Bhat (40), his son Rajiv Bhat (34) and his wife Kusuma Bhat (30).