ಬ್ರೇಕಿಂಗ್ ನ್ಯೂಸ್
22-10-20 06:09 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 22: ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ಮರುಳು ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಸರಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಇರಾನಿ ಗ್ಯಾಂಗ್ಗೆ ಸೇರಿದ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ ಮಿರ್ಜಾ (32), ಅಕ್ಷಯ್ ಸಂಜಯ್ ಗೋಸಾವಿ (22) ಹಾಗೂ ಶಾರುಖ್ ಬಂದೇನವಾಝ್ ಶೇಖ್ (24) ಎಂದು ಗುರುತಿಸಲಾಗಿದೆ.
ಹೊಸದಿಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿವೆ. ವಯಸ್ಸಾದ ಒಂಟಿ ಮಹಿಳೆಯರು ನಡೆದುಕೊಂಡು ಹೋಗುವಾಗ ಮಾತಿಗೆಳೆದು ನಾವು ಪೊಲೀಸರು, ಮುಂದೆ ಗಲಾಟೆ ನಡೆಯುತ್ತಿದೆ. ನಿಮ್ಮ ಚಿನ್ನಾಭರಣಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ ಅವರಲ್ಲಿದ್ದ ಚಿನ್ನಾಭರಣಗಳನ್ನು ಪಡೆದು ಬ್ಯಾಗಿನಲ್ಲಿ ಹಾಕುವಂತೆ ನಂಬಿಸಿ, ಮೋಸದಿಂದ ಎಗರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಇವರು ನಡೆಸಿದ ಕೃತ್ಯಗಳಲ್ಲಿ ಉಡುಪಿ ನಗರ-1, ಕುಂದಾಪುರ-1, ವಿಜಯಪುರ-4, ಚಿಕ್ಕಮಗಳೂರು-1, ಬಂಟ್ವಾಳ-1 ಹಾಗೂ ಮಂಗಳೂರು ಉರ್ವಾದಲ್ಲಿ ಒಂದು ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ನಾಲ್ವರು ಆರೋಪಿಗಳನ್ನು ಬಂಧಿಸುವ ವೇಳೆ ಮಂಗಳೂರಿನ ಪ್ರಕರಣದ 12 ಗ್ರಾಂ ತೂಕದ ಚಿನ್ನದ ಚೈನ್ ಸಿಕ್ಕಿದ್ದು ಅವರಿಂದ ಕೃತ್ಯಕ್ಕೆ ಬಳಸಿದ ಕಾರು, ಹೊಂಡಾ ಶೈನ್ ಬೈಕ್, ಎರಡು ಹೆಲ್ಮೆಟ್ ಹಾಗೂ ನಗದು 5,100 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಎನ್ ಅವರ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ.ಆರ್. ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ನಗರ ವೃತ್ತದ ಸಿಪಿಐ ಮಂಜುನಾಥ, ಡಿಸಿಐಬಿ ಪೊಲೀಸ್ ನಿರೀಕ್ಷಕ ಮಂಜುನಾಥ ಡಿ.ಆರ್. ಹಾಗೂ ಸಿಬ್ಬಂದಿಗಳು ನಡೆಸಿದ್ದರು.
Udupi Police have arrested four members belonging to the infamous Irani gang from the city. The arrested are identified as Zakhir Hussain (26), Kambar Rahim Mirza (32), Akshay Sanjaya Gosavi (22), and Shaharuk Bande Nawaz Sheikh (24).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm