ಬ್ರೇಕಿಂಗ್ ನ್ಯೂಸ್
22-10-20 06:09 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 22: ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ಮರುಳು ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಸರಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಇರಾನಿ ಗ್ಯಾಂಗ್ಗೆ ಸೇರಿದ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ ಮಿರ್ಜಾ (32), ಅಕ್ಷಯ್ ಸಂಜಯ್ ಗೋಸಾವಿ (22) ಹಾಗೂ ಶಾರುಖ್ ಬಂದೇನವಾಝ್ ಶೇಖ್ (24) ಎಂದು ಗುರುತಿಸಲಾಗಿದೆ.
ಹೊಸದಿಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿವೆ. ವಯಸ್ಸಾದ ಒಂಟಿ ಮಹಿಳೆಯರು ನಡೆದುಕೊಂಡು ಹೋಗುವಾಗ ಮಾತಿಗೆಳೆದು ನಾವು ಪೊಲೀಸರು, ಮುಂದೆ ಗಲಾಟೆ ನಡೆಯುತ್ತಿದೆ. ನಿಮ್ಮ ಚಿನ್ನಾಭರಣಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ ಅವರಲ್ಲಿದ್ದ ಚಿನ್ನಾಭರಣಗಳನ್ನು ಪಡೆದು ಬ್ಯಾಗಿನಲ್ಲಿ ಹಾಕುವಂತೆ ನಂಬಿಸಿ, ಮೋಸದಿಂದ ಎಗರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆ ವೇಳೆ ಇವರು ನಡೆಸಿದ ಕೃತ್ಯಗಳಲ್ಲಿ ಉಡುಪಿ ನಗರ-1, ಕುಂದಾಪುರ-1, ವಿಜಯಪುರ-4, ಚಿಕ್ಕಮಗಳೂರು-1, ಬಂಟ್ವಾಳ-1 ಹಾಗೂ ಮಂಗಳೂರು ಉರ್ವಾದಲ್ಲಿ ಒಂದು ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ನಾಲ್ವರು ಆರೋಪಿಗಳನ್ನು ಬಂಧಿಸುವ ವೇಳೆ ಮಂಗಳೂರಿನ ಪ್ರಕರಣದ 12 ಗ್ರಾಂ ತೂಕದ ಚಿನ್ನದ ಚೈನ್ ಸಿಕ್ಕಿದ್ದು ಅವರಿಂದ ಕೃತ್ಯಕ್ಕೆ ಬಳಸಿದ ಕಾರು, ಹೊಂಡಾ ಶೈನ್ ಬೈಕ್, ಎರಡು ಹೆಲ್ಮೆಟ್ ಹಾಗೂ ನಗದು 5,100 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಎನ್ ಅವರ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ.ಆರ್. ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ನಗರ ವೃತ್ತದ ಸಿಪಿಐ ಮಂಜುನಾಥ, ಡಿಸಿಐಬಿ ಪೊಲೀಸ್ ನಿರೀಕ್ಷಕ ಮಂಜುನಾಥ ಡಿ.ಆರ್. ಹಾಗೂ ಸಿಬ್ಬಂದಿಗಳು ನಡೆಸಿದ್ದರು.
Udupi Police have arrested four members belonging to the infamous Irani gang from the city. The arrested are identified as Zakhir Hussain (26), Kambar Rahim Mirza (32), Akshay Sanjaya Gosavi (22), and Shaharuk Bande Nawaz Sheikh (24).
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am