ಬ್ರೇಕಿಂಗ್ ನ್ಯೂಸ್
02-03-23 09:29 pm Bangalore Correspondent ಕ್ರೈಂ
ಬೆಂಗಳೂರು, ಮಾ.2: ಅಪಾರ್ಟ್ಮೆಂಟ್ ಮೇಲೆ 15 ಕೋಟಿ ಸಾಲ ಇದೆಯೆಂದು ಹೇಳಿ ಬ್ಯಾಂಕ್ ಸಿಬಂದಿ ಏಕಾಏಕಿ ನ್ಯಾಯಾಲಯದ ಆದೇಶದ ನೆಪದಲ್ಲಿ 29 ಮನೆಗಳನ್ನು ಸೀಜ್ ಮಾಡಿ, ನೂರಕ್ಕೂ ಹೆಚ್ಚು ಮಂದಿಯನ್ನು ಬೀದಿಗೆ ತಳ್ಳಿದ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ರಾಜಾಜಿನಗರದ ಶಿವನಹಳ್ಳಿಯ ಐಶ್ವರ್ಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಶಿವಣ್ಣ ಎಂಬವರಿಗೆ ಸೇರಿದ ಅಪಾರ್ಟ್ಮೆಂಟ್ ಇದಾಗಿದ್ದು, ಬ್ಯಾಂಕ್ ಸಾಲ ಮರುಪಾವತಿ ಮಾಡಿಲ್ಲವೆಂದು ಅಲ್ಲಿರುವ ಮನೆಗಳನ್ನು ಜಪ್ತಿ ಮಾಡಿದ್ದಾರೆ. ಇದರಿಂದ 25 ವರ್ಷಗಳಿಂದ ಮನೆಗಳನ್ನು ಲೀಸ್ ಪಡೆದಿದ್ದವರು ಶಾಕ್ ಆಗಿದ್ದಾರೆ. 29 ಮನೆಗಳ ಸಂಸಾರವನ್ನು ಏಕಾಏಕಿ ಬ್ಯಾಂಕ್ ಸಿಬಂದಿ ಮತ್ತು ಜೊತೆಗೆ ಬಂದಿದ್ದ ಮೂರನೇ ವ್ಯಕ್ತಿಗಳು ದೌರ್ಜನ್ಯ ನಡೆಸಿ ಬೀದಿಗೆ ತಳ್ಳಿದ್ದಾರೆ. ಮನೆಮಂದಿ ಕೂಡಲೇ ಮನೆ ಖಾಲಿ ಮಾಡಬೇಕೆಂದು ಹೇಳಿ ದೌರ್ಜನ್ಯ ಎಸಗಿದ್ದಾರೆ.

ಅಪಾರ್ಟ್ಮೆಂಟ್ ಹೆಸರಲ್ಲಿ ಕೆನರಾ ಬ್ಯಾಂಕ್ ನಿಂದ 15 ಕೋಟಿ ಸಾಲ ಪಡೆದಿದ್ದಾರೆ ಎನ್ನಲಾಗುತ್ತಿದೆ. ಬಹುತೇಕ ಎಲ್ಲ ಕುಟುಂಬದವರು ಮನೆಗಳನ್ನು ಲೀಸ್ ಮೇಲೆ ಪಡೆದಿದ್ದು, ಈಗ ಏಕಾಏಕಿ ಎದ್ದು ಹೋಗಿ ಅಂದರೆ ಎಲ್ಲಿ ಹೋಗುವುದು ಎಂದು ಕಂಗಾಲಾಗಿದ್ದಾರೆ. ಮಾಲೀಕರು ಮಾಡಿದ ದೋಖಾಗೆ ಮನೆಗಳನ್ನು ಭೋಗ್ಯಕ್ಕೆ ಪಡೆದವರು ಈಗ ಸಿಕ್ಕಿಬೀಳುವಂತಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
25 ವರ್ಷಗಳಿಂದ ನಾವು ಮನೆಯಲ್ಲಿದ್ದೀವಿ, ಇದುವರೆಗೂ ಸಾಲದ ಬಗ್ಗೆ ನಮಗೆ ಗೊತ್ತಿಲ್ಲ, ಇಬ್ಬರು ಬ್ಯಾಂಕ್ ಸಿಬಂದಿ, ಥರ್ಡ್ ಪಾರ್ಟಿಯವರನ್ನು ಕರೆಸ್ಕೊಂಡು ಬಂದು ಮನೆ ಒಳಗಡೆ ನುಗ್ಗಿ ದಾಂಧಲೆ ನಡೆಸಿದ್ದಾರೆ, ಅಮ್ಮನ ಮೇಲೆ ಕಾಲಲ್ಲಿ ಒದ್ದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಮಧ್ಯಾಹ್ನ ಹೊತ್ತಲ್ಲಿ ಬಂದು ದಾಂಧಲೆ ನಡೆಸಿದರೆ ಹೇಗೆ ಎಂದು ಮಾದೇಶ್ ಎಂಬವರು ಸುದ್ದಿ ವಾಹಿನಿಯ ಜೊತೆಗೆ ಅಲವತ್ತುಕೊಂಡಿದ್ದಾರೆ.
Big scam, 15 crore loan in the name of Aishwarya Apartment in Bengaluru, 29 flats seized by Bank in Bangalore, hundreds homeless. Flat residents were shocked after a sudden raid by bank officials.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am