ಬ್ರೇಕಿಂಗ್ ನ್ಯೂಸ್
02-03-23 09:29 pm Bangalore Correspondent ಕ್ರೈಂ
ಬೆಂಗಳೂರು, ಮಾ.2: ಅಪಾರ್ಟ್ಮೆಂಟ್ ಮೇಲೆ 15 ಕೋಟಿ ಸಾಲ ಇದೆಯೆಂದು ಹೇಳಿ ಬ್ಯಾಂಕ್ ಸಿಬಂದಿ ಏಕಾಏಕಿ ನ್ಯಾಯಾಲಯದ ಆದೇಶದ ನೆಪದಲ್ಲಿ 29 ಮನೆಗಳನ್ನು ಸೀಜ್ ಮಾಡಿ, ನೂರಕ್ಕೂ ಹೆಚ್ಚು ಮಂದಿಯನ್ನು ಬೀದಿಗೆ ತಳ್ಳಿದ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ರಾಜಾಜಿನಗರದ ಶಿವನಹಳ್ಳಿಯ ಐಶ್ವರ್ಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಶಿವಣ್ಣ ಎಂಬವರಿಗೆ ಸೇರಿದ ಅಪಾರ್ಟ್ಮೆಂಟ್ ಇದಾಗಿದ್ದು, ಬ್ಯಾಂಕ್ ಸಾಲ ಮರುಪಾವತಿ ಮಾಡಿಲ್ಲವೆಂದು ಅಲ್ಲಿರುವ ಮನೆಗಳನ್ನು ಜಪ್ತಿ ಮಾಡಿದ್ದಾರೆ. ಇದರಿಂದ 25 ವರ್ಷಗಳಿಂದ ಮನೆಗಳನ್ನು ಲೀಸ್ ಪಡೆದಿದ್ದವರು ಶಾಕ್ ಆಗಿದ್ದಾರೆ. 29 ಮನೆಗಳ ಸಂಸಾರವನ್ನು ಏಕಾಏಕಿ ಬ್ಯಾಂಕ್ ಸಿಬಂದಿ ಮತ್ತು ಜೊತೆಗೆ ಬಂದಿದ್ದ ಮೂರನೇ ವ್ಯಕ್ತಿಗಳು ದೌರ್ಜನ್ಯ ನಡೆಸಿ ಬೀದಿಗೆ ತಳ್ಳಿದ್ದಾರೆ. ಮನೆಮಂದಿ ಕೂಡಲೇ ಮನೆ ಖಾಲಿ ಮಾಡಬೇಕೆಂದು ಹೇಳಿ ದೌರ್ಜನ್ಯ ಎಸಗಿದ್ದಾರೆ.

ಅಪಾರ್ಟ್ಮೆಂಟ್ ಹೆಸರಲ್ಲಿ ಕೆನರಾ ಬ್ಯಾಂಕ್ ನಿಂದ 15 ಕೋಟಿ ಸಾಲ ಪಡೆದಿದ್ದಾರೆ ಎನ್ನಲಾಗುತ್ತಿದೆ. ಬಹುತೇಕ ಎಲ್ಲ ಕುಟುಂಬದವರು ಮನೆಗಳನ್ನು ಲೀಸ್ ಮೇಲೆ ಪಡೆದಿದ್ದು, ಈಗ ಏಕಾಏಕಿ ಎದ್ದು ಹೋಗಿ ಅಂದರೆ ಎಲ್ಲಿ ಹೋಗುವುದು ಎಂದು ಕಂಗಾಲಾಗಿದ್ದಾರೆ. ಮಾಲೀಕರು ಮಾಡಿದ ದೋಖಾಗೆ ಮನೆಗಳನ್ನು ಭೋಗ್ಯಕ್ಕೆ ಪಡೆದವರು ಈಗ ಸಿಕ್ಕಿಬೀಳುವಂತಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
25 ವರ್ಷಗಳಿಂದ ನಾವು ಮನೆಯಲ್ಲಿದ್ದೀವಿ, ಇದುವರೆಗೂ ಸಾಲದ ಬಗ್ಗೆ ನಮಗೆ ಗೊತ್ತಿಲ್ಲ, ಇಬ್ಬರು ಬ್ಯಾಂಕ್ ಸಿಬಂದಿ, ಥರ್ಡ್ ಪಾರ್ಟಿಯವರನ್ನು ಕರೆಸ್ಕೊಂಡು ಬಂದು ಮನೆ ಒಳಗಡೆ ನುಗ್ಗಿ ದಾಂಧಲೆ ನಡೆಸಿದ್ದಾರೆ, ಅಮ್ಮನ ಮೇಲೆ ಕಾಲಲ್ಲಿ ಒದ್ದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಮಧ್ಯಾಹ್ನ ಹೊತ್ತಲ್ಲಿ ಬಂದು ದಾಂಧಲೆ ನಡೆಸಿದರೆ ಹೇಗೆ ಎಂದು ಮಾದೇಶ್ ಎಂಬವರು ಸುದ್ದಿ ವಾಹಿನಿಯ ಜೊತೆಗೆ ಅಲವತ್ತುಕೊಂಡಿದ್ದಾರೆ.
Big scam, 15 crore loan in the name of Aishwarya Apartment in Bengaluru, 29 flats seized by Bank in Bangalore, hundreds homeless. Flat residents were shocked after a sudden raid by bank officials.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm