ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.


ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm