ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.


ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm