ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.
ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 09:15 pm
HK News Desk
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
20-06-25 09:02 pm
Mangalore Correspondent
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm