ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.
ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am