ಬ್ರೇಕಿಂಗ್ ನ್ಯೂಸ್
03-03-23 11:22 am Mangalore Correspondent ಕ್ರೈಂ
ಮಂಗಳೂರು, ಮಾ.3 : ದರೋಡೆ ಉದ್ದೇಶದಿಂದಲೇ ಜುವೆಲ್ಲರಿ ಉದ್ಯೋಗಿಯನ್ನು ಹತ್ಯೆ ಮಾಡಿದ್ದಾಗಿ ಆರೋಪಿ ಶಿಫಾಸ್ ತಪ್ಪೊಪ್ಪಿಕೊಂಡಿದ್ದು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದು ಕಾಸರಗೋಡು, ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿ ಶಿಫಾಸ್ ನನ್ನು ಸೆರೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೋಜಿಕ್ಕೋಡ್ ಜಿಲ್ಲೆಯ ಚೆಮ್ಮಂಚೇರಿ ಪೂಕಾಡ್ ನಿವಾಸಿ ಶಿಫಾಸ್ ಬಂಧಿತ ಆರೋಪಿ. ಈ ಹಿಂದೆ ಮಂಗಳೂರಿನ ಕರಾವಳಿ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದ ಶಿಫಾಸ್, ಅಲ್ಲಿ ಬಿಇ ಕೋರ್ಸ್ ಪೂರೈಸದೆ ಎರಡು ವರ್ಷದಲ್ಲಿ ಕಾಲೇಜು ಬಿಟ್ಟು ಹೋಗಿದ್ದ. ಆನಂತರ, 2014ರಿಂದ 2019ರ ವರೆಗೆ ದುಬೈನಲ್ಲಿ ಕೆಲಸ ಮಾಡಿದ್ದ ಶಿಫಾಸ್ ಮತ್ತೆ ಊರಿಗೆ ಬಂದು ಎಸ್ಎನ್ಎನ್ ಗ್ಲೋಬಲ್ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ.

ಮಂಗಳೂರಿನಲ್ಲಿ ಫೆ.3ರಂದು ಜುವೆಲ್ಲರಿ ಉದ್ಯೋಗಿಯನ್ನು ಕೊಲೆಗೈದು ನಾಪತ್ತೆಯಾಗಿದ್ದ ಆರೋಪಿ, ಕೃತ್ಯದ ಬಳಿಕ ತನ್ನ ಊರು ಕೋಜಿಕ್ಕೋಡ್ ಜಿಲ್ಲೆಗೆ ತೆರಳಿ ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರು ಪೊಲೀಸರು ಸಿಸಿಟಿವಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಕಾಸರಗೋಡು ಮೂಲಕ ತೆರಳಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಚಲನವಲನದ ಬಗ್ಗೆ ಅಲ್ಲಿನ ಪೊಲೀಸರ ಸಹಾಯದಿಂದ ನಿಗಾ ಇಟ್ಟಿದ್ದರು. ಸಿಸಿಟಿವಿಯಲ್ಲಿ ದೊರೆತ ಚಿತ್ರಗಳನ್ನು ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಿ, ಈತನ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಕೇಳಿಕೊಂಡಿದ್ದರು.
ಗುರುವಾರ ಕೋಜಿಕ್ಕೋಡ್ ನಿಂದ ರೈಲು ಮೂಲಕ ಕಾಸರಗೋಡಿಗೆ ಬಂದಿದ್ದು ಎರಡೆರಡು ಶರ್ಟ್ ಧರಿಸಿದ್ದ. ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ. ಹಿಂದಿನ ರೀತಿಯಲ್ಲೇ ದರೋಡೆ ಉದ್ದೇಶದಿಂದ ಸ್ಕೆಚ್ ಹಾಕುತ್ತಿದ್ದ. ಇದೇ ವೇಳೆ, ಕಾಸರಗೋಡು ಪೊಲೀಸರು ಆರೋಪಿಯನ್ನು ಸಂಶಯದಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದರೋಡೆ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಶಿಫಾಸ್ ಕ್ಯಾಲಿಕಟ್ ನಲ್ಲಿ ತಂದೆ, ತಾಯಿ, ಪತ್ನಿ ಮತ್ತು ಒಬ್ಬಳು ಮಗಳ ಜೊತೆ ವಾಸ ಮಾಡುತ್ತಿದ್ದ. ಈತನ ಇಬ್ಬರು ಸೋದರರು ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿಯನ್ನು ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದಾರೆ.
Mangalore Hampankatta jewellery shop staff murder Accused arrested from kerala, intention was robbery claims Police. The Kasargod police have arrested the prime suspect in the murder case at a jewellery shop in Hampankatta. The accused has been identified as 33-year-old Shifaz, a resident of Kozhikode.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm