ಬ್ರೇಕಿಂಗ್ ನ್ಯೂಸ್
03-03-23 11:22 am Mangalore Correspondent ಕ್ರೈಂ
ಮಂಗಳೂರು, ಮಾ.3 : ದರೋಡೆ ಉದ್ದೇಶದಿಂದಲೇ ಜುವೆಲ್ಲರಿ ಉದ್ಯೋಗಿಯನ್ನು ಹತ್ಯೆ ಮಾಡಿದ್ದಾಗಿ ಆರೋಪಿ ಶಿಫಾಸ್ ತಪ್ಪೊಪ್ಪಿಕೊಂಡಿದ್ದು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದು ಕಾಸರಗೋಡು, ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿ ಶಿಫಾಸ್ ನನ್ನು ಸೆರೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೋಜಿಕ್ಕೋಡ್ ಜಿಲ್ಲೆಯ ಚೆಮ್ಮಂಚೇರಿ ಪೂಕಾಡ್ ನಿವಾಸಿ ಶಿಫಾಸ್ ಬಂಧಿತ ಆರೋಪಿ. ಈ ಹಿಂದೆ ಮಂಗಳೂರಿನ ಕರಾವಳಿ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದ ಶಿಫಾಸ್, ಅಲ್ಲಿ ಬಿಇ ಕೋರ್ಸ್ ಪೂರೈಸದೆ ಎರಡು ವರ್ಷದಲ್ಲಿ ಕಾಲೇಜು ಬಿಟ್ಟು ಹೋಗಿದ್ದ. ಆನಂತರ, 2014ರಿಂದ 2019ರ ವರೆಗೆ ದುಬೈನಲ್ಲಿ ಕೆಲಸ ಮಾಡಿದ್ದ ಶಿಫಾಸ್ ಮತ್ತೆ ಊರಿಗೆ ಬಂದು ಎಸ್ಎನ್ಎನ್ ಗ್ಲೋಬಲ್ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ.

ಮಂಗಳೂರಿನಲ್ಲಿ ಫೆ.3ರಂದು ಜುವೆಲ್ಲರಿ ಉದ್ಯೋಗಿಯನ್ನು ಕೊಲೆಗೈದು ನಾಪತ್ತೆಯಾಗಿದ್ದ ಆರೋಪಿ, ಕೃತ್ಯದ ಬಳಿಕ ತನ್ನ ಊರು ಕೋಜಿಕ್ಕೋಡ್ ಜಿಲ್ಲೆಗೆ ತೆರಳಿ ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರು ಪೊಲೀಸರು ಸಿಸಿಟಿವಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಕಾಸರಗೋಡು ಮೂಲಕ ತೆರಳಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಚಲನವಲನದ ಬಗ್ಗೆ ಅಲ್ಲಿನ ಪೊಲೀಸರ ಸಹಾಯದಿಂದ ನಿಗಾ ಇಟ್ಟಿದ್ದರು. ಸಿಸಿಟಿವಿಯಲ್ಲಿ ದೊರೆತ ಚಿತ್ರಗಳನ್ನು ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಿ, ಈತನ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಕೇಳಿಕೊಂಡಿದ್ದರು.
ಗುರುವಾರ ಕೋಜಿಕ್ಕೋಡ್ ನಿಂದ ರೈಲು ಮೂಲಕ ಕಾಸರಗೋಡಿಗೆ ಬಂದಿದ್ದು ಎರಡೆರಡು ಶರ್ಟ್ ಧರಿಸಿದ್ದ. ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ. ಹಿಂದಿನ ರೀತಿಯಲ್ಲೇ ದರೋಡೆ ಉದ್ದೇಶದಿಂದ ಸ್ಕೆಚ್ ಹಾಕುತ್ತಿದ್ದ. ಇದೇ ವೇಳೆ, ಕಾಸರಗೋಡು ಪೊಲೀಸರು ಆರೋಪಿಯನ್ನು ಸಂಶಯದಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದರೋಡೆ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಶಿಫಾಸ್ ಕ್ಯಾಲಿಕಟ್ ನಲ್ಲಿ ತಂದೆ, ತಾಯಿ, ಪತ್ನಿ ಮತ್ತು ಒಬ್ಬಳು ಮಗಳ ಜೊತೆ ವಾಸ ಮಾಡುತ್ತಿದ್ದ. ಈತನ ಇಬ್ಬರು ಸೋದರರು ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿಯನ್ನು ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದಾರೆ.
Mangalore Hampankatta jewellery shop staff murder Accused arrested from kerala, intention was robbery claims Police. The Kasargod police have arrested the prime suspect in the murder case at a jewellery shop in Hampankatta. The accused has been identified as 33-year-old Shifaz, a resident of Kozhikode.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm