ಬ್ರೇಕಿಂಗ್ ನ್ಯೂಸ್
03-03-23 11:22 am Mangalore Correspondent ಕ್ರೈಂ
ಮಂಗಳೂರು, ಮಾ.3 : ದರೋಡೆ ಉದ್ದೇಶದಿಂದಲೇ ಜುವೆಲ್ಲರಿ ಉದ್ಯೋಗಿಯನ್ನು ಹತ್ಯೆ ಮಾಡಿದ್ದಾಗಿ ಆರೋಪಿ ಶಿಫಾಸ್ ತಪ್ಪೊಪ್ಪಿಕೊಂಡಿದ್ದು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದು ಕಾಸರಗೋಡು, ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿ ಶಿಫಾಸ್ ನನ್ನು ಸೆರೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೋಜಿಕ್ಕೋಡ್ ಜಿಲ್ಲೆಯ ಚೆಮ್ಮಂಚೇರಿ ಪೂಕಾಡ್ ನಿವಾಸಿ ಶಿಫಾಸ್ ಬಂಧಿತ ಆರೋಪಿ. ಈ ಹಿಂದೆ ಮಂಗಳೂರಿನ ಕರಾವಳಿ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದ ಶಿಫಾಸ್, ಅಲ್ಲಿ ಬಿಇ ಕೋರ್ಸ್ ಪೂರೈಸದೆ ಎರಡು ವರ್ಷದಲ್ಲಿ ಕಾಲೇಜು ಬಿಟ್ಟು ಹೋಗಿದ್ದ. ಆನಂತರ, 2014ರಿಂದ 2019ರ ವರೆಗೆ ದುಬೈನಲ್ಲಿ ಕೆಲಸ ಮಾಡಿದ್ದ ಶಿಫಾಸ್ ಮತ್ತೆ ಊರಿಗೆ ಬಂದು ಎಸ್ಎನ್ಎನ್ ಗ್ಲೋಬಲ್ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ.

ಮಂಗಳೂರಿನಲ್ಲಿ ಫೆ.3ರಂದು ಜುವೆಲ್ಲರಿ ಉದ್ಯೋಗಿಯನ್ನು ಕೊಲೆಗೈದು ನಾಪತ್ತೆಯಾಗಿದ್ದ ಆರೋಪಿ, ಕೃತ್ಯದ ಬಳಿಕ ತನ್ನ ಊರು ಕೋಜಿಕ್ಕೋಡ್ ಜಿಲ್ಲೆಗೆ ತೆರಳಿ ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರು ಪೊಲೀಸರು ಸಿಸಿಟಿವಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಕಾಸರಗೋಡು ಮೂಲಕ ತೆರಳಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಚಲನವಲನದ ಬಗ್ಗೆ ಅಲ್ಲಿನ ಪೊಲೀಸರ ಸಹಾಯದಿಂದ ನಿಗಾ ಇಟ್ಟಿದ್ದರು. ಸಿಸಿಟಿವಿಯಲ್ಲಿ ದೊರೆತ ಚಿತ್ರಗಳನ್ನು ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಿ, ಈತನ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಕೇಳಿಕೊಂಡಿದ್ದರು.
ಗುರುವಾರ ಕೋಜಿಕ್ಕೋಡ್ ನಿಂದ ರೈಲು ಮೂಲಕ ಕಾಸರಗೋಡಿಗೆ ಬಂದಿದ್ದು ಎರಡೆರಡು ಶರ್ಟ್ ಧರಿಸಿದ್ದ. ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ. ಹಿಂದಿನ ರೀತಿಯಲ್ಲೇ ದರೋಡೆ ಉದ್ದೇಶದಿಂದ ಸ್ಕೆಚ್ ಹಾಕುತ್ತಿದ್ದ. ಇದೇ ವೇಳೆ, ಕಾಸರಗೋಡು ಪೊಲೀಸರು ಆರೋಪಿಯನ್ನು ಸಂಶಯದಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದರೋಡೆ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಶಿಫಾಸ್ ಕ್ಯಾಲಿಕಟ್ ನಲ್ಲಿ ತಂದೆ, ತಾಯಿ, ಪತ್ನಿ ಮತ್ತು ಒಬ್ಬಳು ಮಗಳ ಜೊತೆ ವಾಸ ಮಾಡುತ್ತಿದ್ದ. ಈತನ ಇಬ್ಬರು ಸೋದರರು ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿಯನ್ನು ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದಾರೆ.
Mangalore Hampankatta jewellery shop staff murder Accused arrested from kerala, intention was robbery claims Police. The Kasargod police have arrested the prime suspect in the murder case at a jewellery shop in Hampankatta. The accused has been identified as 33-year-old Shifaz, a resident of Kozhikode.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm