ಬ್ರೇಕಿಂಗ್ ನ್ಯೂಸ್
04-03-23 05:04 pm Mangaluru Correspondent ಕ್ರೈಂ
ಮಂಗಳೂರು, ಮಾ.4: ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರಿನ ಮಲಾರ್ ಗ್ರಾಮದ ಪಲ್ಲಿಯಬ್ಬ ಕೊಲೆ ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಎಲ್ಲ ಐದು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ.
ಮಲಾರ್ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಹಂಝ(47), ಅಜರುದ್ದೀನ್ ಅಲಿಯಾಸ್ ಅಜರ್ (29), ಸಜಿಪ ನಡು ನಿವಾಸಿಗಳಾದ ಅಮೀರ್ ಅಲಿಯಾಸ್ ಅಮ್ಮಿ(29), ಮೊಹಮ್ಮದ್ ಅಫ್ರಾಜ್(23), ಅತ್ತಾವುಲ್ಲಾ ಅಲಿಯಾಸ್ ಅಲ್ತಾಫ್(23) ಜೀವಾವಧಿ ಶಿಕ್ಷೆಗೊಳಗಾದವರು.
2020ರ ಅಕ್ಟೋಬರ್ 20ರಂದು ಮಲಾರ್ ಗ್ರಾಮದ ಪಲ್ಲಿಯಬ್ಬ ನಾಪತ್ತೆ ಬಗ್ಗೆ ಕೊಣಾಜೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದರು. ಪಲ್ಲಿಯಬ್ಬ ಅದೇ ಗ್ರಾಮದ ಮೊಹಮ್ಮದ್ ಹಂಝನಿಗೆ 72 ಸಾವಿರ ರೂ. ನೀಡಿದ್ದರು. ಹಣ ಮರಳಿಸುವಂತೆ ಒತ್ತಡ ಹೇರುತ್ತಿದ್ದರು. ಹಣದ ವಿಚಾರದಲ್ಲಿ ವಾಗ್ವಾದವೂ ನಡೆದಿತ್ತು. ಆನಂತರ, ಹಂಝ ಮತ್ತು ಅಜರ್ ಹಣವನ್ನು ಕೊಣಾಜೆಯಲ್ಲಿ ಕೊಡಿಸುತ್ತೇನೆಂದು ಆಟೋದಲ್ಲಿ ಕರೆದೊಯ್ದಿದ್ದು, ಇರಾ ಪದವಿನ ನಿರ್ಜನ ಪ್ರದೇಶದಲ್ಲಿ ಇನ್ನಿತರ ಯುವಕರ ಜೊತೆಗೆ ಸೇರಿ ಪಲ್ಲಿಯಬ್ಬ ಅವರನ್ನು ಕೊಲೆಗೈದು ಸುಟ್ಟು ಹಾಕಿದ್ದರು.
ಪಲ್ಲಿಯಬ್ಬ ಅವರ ಸೋದರ ನಾಪತ್ತೆ ಕೇಸು ನೀಡಿದ್ದು ಮತ್ತು ಹಣದ ವಿಚಾರದಲ್ಲಿ ಜಗಳ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರಿಂದ ತನಿಖೆ ನಡೆಸಿದ ಪೊಲೀಸರು ಕೊಲೆ ಕೃತ್ಯ ಪತ್ತೆ ಮಾಡಿದ್ದರು. ಕೊಣಾಜೆ ಇನ್ಸ್ ಪೆಕ್ಟರ್ ಮಧುಸೂದನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ್ದಲ್ಲದೆ, 3 ಲಕ್ಷ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಪಲ್ಲಿಯಬ್ಬ ಅವರ ಪುತ್ರಿಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸಂತ್ರಸ್ತರ ಪರವಾಗಿ ಸರಕಾರಿ ವಕೀಲ ನಾರಾಯಣ ಶೇರಿಗಾರ್ ವಾದಿಸಿದ್ದರು.
The city court has sentenced the persons involved in the Palliabba murder case to life imprisonment. The accused who were convicted are Mohammed Hamza (47), Azharuddin alias Azhar (29), residents of Malar, Ameer alias Ammi (29), Mohammed Afraz (23) and Ataullah alias Altaf (23), residents of Sajipa Nadu village. Palliabba was running a finance business, and his brother registered a missing complaint with the police on October 29, 2020. The investigation revealed that Palliabba had gone in an autorickshaw with Hamza, Afraz, Ameer, and Altaf.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm