ಬ್ರೇಕಿಂಗ್ ನ್ಯೂಸ್
04-03-23 05:04 pm Mangaluru Correspondent ಕ್ರೈಂ
ಮಂಗಳೂರು, ಮಾ.4: ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರಿನ ಮಲಾರ್ ಗ್ರಾಮದ ಪಲ್ಲಿಯಬ್ಬ ಕೊಲೆ ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಎಲ್ಲ ಐದು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ.
ಮಲಾರ್ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಹಂಝ(47), ಅಜರುದ್ದೀನ್ ಅಲಿಯಾಸ್ ಅಜರ್ (29), ಸಜಿಪ ನಡು ನಿವಾಸಿಗಳಾದ ಅಮೀರ್ ಅಲಿಯಾಸ್ ಅಮ್ಮಿ(29), ಮೊಹಮ್ಮದ್ ಅಫ್ರಾಜ್(23), ಅತ್ತಾವುಲ್ಲಾ ಅಲಿಯಾಸ್ ಅಲ್ತಾಫ್(23) ಜೀವಾವಧಿ ಶಿಕ್ಷೆಗೊಳಗಾದವರು.
2020ರ ಅಕ್ಟೋಬರ್ 20ರಂದು ಮಲಾರ್ ಗ್ರಾಮದ ಪಲ್ಲಿಯಬ್ಬ ನಾಪತ್ತೆ ಬಗ್ಗೆ ಕೊಣಾಜೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದರು. ಪಲ್ಲಿಯಬ್ಬ ಅದೇ ಗ್ರಾಮದ ಮೊಹಮ್ಮದ್ ಹಂಝನಿಗೆ 72 ಸಾವಿರ ರೂ. ನೀಡಿದ್ದರು. ಹಣ ಮರಳಿಸುವಂತೆ ಒತ್ತಡ ಹೇರುತ್ತಿದ್ದರು. ಹಣದ ವಿಚಾರದಲ್ಲಿ ವಾಗ್ವಾದವೂ ನಡೆದಿತ್ತು. ಆನಂತರ, ಹಂಝ ಮತ್ತು ಅಜರ್ ಹಣವನ್ನು ಕೊಣಾಜೆಯಲ್ಲಿ ಕೊಡಿಸುತ್ತೇನೆಂದು ಆಟೋದಲ್ಲಿ ಕರೆದೊಯ್ದಿದ್ದು, ಇರಾ ಪದವಿನ ನಿರ್ಜನ ಪ್ರದೇಶದಲ್ಲಿ ಇನ್ನಿತರ ಯುವಕರ ಜೊತೆಗೆ ಸೇರಿ ಪಲ್ಲಿಯಬ್ಬ ಅವರನ್ನು ಕೊಲೆಗೈದು ಸುಟ್ಟು ಹಾಕಿದ್ದರು.
ಪಲ್ಲಿಯಬ್ಬ ಅವರ ಸೋದರ ನಾಪತ್ತೆ ಕೇಸು ನೀಡಿದ್ದು ಮತ್ತು ಹಣದ ವಿಚಾರದಲ್ಲಿ ಜಗಳ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರಿಂದ ತನಿಖೆ ನಡೆಸಿದ ಪೊಲೀಸರು ಕೊಲೆ ಕೃತ್ಯ ಪತ್ತೆ ಮಾಡಿದ್ದರು. ಕೊಣಾಜೆ ಇನ್ಸ್ ಪೆಕ್ಟರ್ ಮಧುಸೂದನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ್ದಲ್ಲದೆ, 3 ಲಕ್ಷ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಪಲ್ಲಿಯಬ್ಬ ಅವರ ಪುತ್ರಿಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸಂತ್ರಸ್ತರ ಪರವಾಗಿ ಸರಕಾರಿ ವಕೀಲ ನಾರಾಯಣ ಶೇರಿಗಾರ್ ವಾದಿಸಿದ್ದರು.
The city court has sentenced the persons involved in the Palliabba murder case to life imprisonment. The accused who were convicted are Mohammed Hamza (47), Azharuddin alias Azhar (29), residents of Malar, Ameer alias Ammi (29), Mohammed Afraz (23) and Ataullah alias Altaf (23), residents of Sajipa Nadu village. Palliabba was running a finance business, and his brother registered a missing complaint with the police on October 29, 2020. The investigation revealed that Palliabba had gone in an autorickshaw with Hamza, Afraz, Ameer, and Altaf.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am