ಬ್ರೇಕಿಂಗ್ ನ್ಯೂಸ್
04-03-23 05:04 pm Mangaluru Correspondent ಕ್ರೈಂ
ಮಂಗಳೂರು, ಮಾ.4: ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರಿನ ಮಲಾರ್ ಗ್ರಾಮದ ಪಲ್ಲಿಯಬ್ಬ ಕೊಲೆ ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಎಲ್ಲ ಐದು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ.
ಮಲಾರ್ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಹಂಝ(47), ಅಜರುದ್ದೀನ್ ಅಲಿಯಾಸ್ ಅಜರ್ (29), ಸಜಿಪ ನಡು ನಿವಾಸಿಗಳಾದ ಅಮೀರ್ ಅಲಿಯಾಸ್ ಅಮ್ಮಿ(29), ಮೊಹಮ್ಮದ್ ಅಫ್ರಾಜ್(23), ಅತ್ತಾವುಲ್ಲಾ ಅಲಿಯಾಸ್ ಅಲ್ತಾಫ್(23) ಜೀವಾವಧಿ ಶಿಕ್ಷೆಗೊಳಗಾದವರು.
2020ರ ಅಕ್ಟೋಬರ್ 20ರಂದು ಮಲಾರ್ ಗ್ರಾಮದ ಪಲ್ಲಿಯಬ್ಬ ನಾಪತ್ತೆ ಬಗ್ಗೆ ಕೊಣಾಜೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದರು. ಪಲ್ಲಿಯಬ್ಬ ಅದೇ ಗ್ರಾಮದ ಮೊಹಮ್ಮದ್ ಹಂಝನಿಗೆ 72 ಸಾವಿರ ರೂ. ನೀಡಿದ್ದರು. ಹಣ ಮರಳಿಸುವಂತೆ ಒತ್ತಡ ಹೇರುತ್ತಿದ್ದರು. ಹಣದ ವಿಚಾರದಲ್ಲಿ ವಾಗ್ವಾದವೂ ನಡೆದಿತ್ತು. ಆನಂತರ, ಹಂಝ ಮತ್ತು ಅಜರ್ ಹಣವನ್ನು ಕೊಣಾಜೆಯಲ್ಲಿ ಕೊಡಿಸುತ್ತೇನೆಂದು ಆಟೋದಲ್ಲಿ ಕರೆದೊಯ್ದಿದ್ದು, ಇರಾ ಪದವಿನ ನಿರ್ಜನ ಪ್ರದೇಶದಲ್ಲಿ ಇನ್ನಿತರ ಯುವಕರ ಜೊತೆಗೆ ಸೇರಿ ಪಲ್ಲಿಯಬ್ಬ ಅವರನ್ನು ಕೊಲೆಗೈದು ಸುಟ್ಟು ಹಾಕಿದ್ದರು.
ಪಲ್ಲಿಯಬ್ಬ ಅವರ ಸೋದರ ನಾಪತ್ತೆ ಕೇಸು ನೀಡಿದ್ದು ಮತ್ತು ಹಣದ ವಿಚಾರದಲ್ಲಿ ಜಗಳ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರಿಂದ ತನಿಖೆ ನಡೆಸಿದ ಪೊಲೀಸರು ಕೊಲೆ ಕೃತ್ಯ ಪತ್ತೆ ಮಾಡಿದ್ದರು. ಕೊಣಾಜೆ ಇನ್ಸ್ ಪೆಕ್ಟರ್ ಮಧುಸೂದನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ್ದಲ್ಲದೆ, 3 ಲಕ್ಷ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಪಲ್ಲಿಯಬ್ಬ ಅವರ ಪುತ್ರಿಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸಂತ್ರಸ್ತರ ಪರವಾಗಿ ಸರಕಾರಿ ವಕೀಲ ನಾರಾಯಣ ಶೇರಿಗಾರ್ ವಾದಿಸಿದ್ದರು.
The city court has sentenced the persons involved in the Palliabba murder case to life imprisonment. The accused who were convicted are Mohammed Hamza (47), Azharuddin alias Azhar (29), residents of Malar, Ameer alias Ammi (29), Mohammed Afraz (23) and Ataullah alias Altaf (23), residents of Sajipa Nadu village. Palliabba was running a finance business, and his brother registered a missing complaint with the police on October 29, 2020. The investigation revealed that Palliabba had gone in an autorickshaw with Hamza, Afraz, Ameer, and Altaf.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 07:49 pm
Mangalore Correspondent
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm