ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm