ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm