ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am