ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am