ಬ್ರೇಕಿಂಗ್ ನ್ಯೂಸ್
14-03-23 09:40 pm Mangalore Correspondent ಕ್ರೈಂ
ಮಂಗಳೂರು, ಮಾ.14: ಕೊಲೆ, ಕೊಲೆಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಜಪಾನ್ ಮಂಗ ಅಲಿಯಾಸ್ ರೋಹನ್ ರೆಡ್ಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ.
2013ರಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಡೆದ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ಕದ್ರಿಯಲ್ಲಿ ಉದ್ಯಮಿಯೊಬ್ಬರ ಕೊಲೆಯತ್ನ, ಮಂಗಳೂರು ಜೈಲಿನಲ್ಲಿ ಹಲ್ಲೆ ಪ್ರಕರಣ, ನ್ಯಾಯಾಲಯ ಆವರಣದಲ್ಲಿ ಯುವಕನ ಅಟ್ಟಾಡಿಸಿ ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಪತ್ತೆಗೆ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು.
ಮಂಗಳೂರಿನಿಂದ ತಪ್ಪಿಸಿಕೊಂಡು ಬೆಂಗಳೂರು ತೆರಳಿದ್ದ ಆರೋಪಿ ಜಪಾನ್ ಮಂಗ ಅಲ್ಲಿ ತಲೆಮರೆಸಿಕೊಂಡು ಬೇರೆ ಹೆಸರಿನಲ್ಲಿ ನೆಲೆಸಿದ್ದ. ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ಬದಲಿಸಿ ನಕಲಿ ದಾಖಲೆಯನ್ನು ಸೃಷ್ಟಿಸಿದ್ದಲ್ಲದೆ, ಅದೇ ಹೆಸರಿನಲ್ಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ. ಆಧಾರ್ ಕಾರ್ಡ್ ತೋರಿಸಿ ಹೊಸತಾಗಿ ಮೊಬೈಲ್ ಸಿಮ್ ಖರೀದಿಸಿದ್ದ. 2017ರಲ್ಲಿ ಮಂಗಳೂರಿನ ಕೋರ್ಟಿಗೆ ಕೊನೆಯ ಬಾರಿಗೆ ಹಾಜರಾಗಿದ್ದು, ಆನಂತರ ನಾಪತ್ತೆಯಾಗಿದ್ದ.
2022ರಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವುದಲ್ಲದೆ, ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ವಿಭಾಗದ ಎಸಿಪಿ ಪಿ.ಎ. ಹೆಗಡೆ ನೇತೃತ್ವದಲ್ಲಿ ಸಿಬಂದಿ ಪಾಲ್ಗೊಂಡಿದ್ದರು.
Mangalore Notorious criminal Japan Manga absconding since years arrested by police in Bangalore. Japan Manga was wanted in several criminal cases. Commissioner Kuldeep kumar jain who was closely monitoring old cases have succeeded in nabbing the many accused in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm