ಬ್ರೇಕಿಂಗ್ ನ್ಯೂಸ್
24-10-20 12:31 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 24: ಅತ್ತ ಮಹಾನಗರ ಪಾಲಿಕೆ ಹೊರ ರಾಜ್ಯದ, ಹೊರ ಜಿಲ್ಲೆಗಳ ಬೀಫ್ ಮಾಂಸ ತಂದು ಮಾರುವಂತಿಲ್ಲ ಎಂದು ಸೂಚನೆ ಕೊಟ್ಟಿರುವಾಗಲೇ ಕುದ್ರೋಳಿ ಕಸಾಯಿಖಾನೆಯಲ್ಲಿ ಹೊರಗಿನಿಂದ ತರುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಕ್ವಿಂಟಾಲ್ ನಷ್ಟು ದನದ ಮಾಂಸವನ್ನು ತರಲಾಗಿದೆ. ವಾಹನದಲ್ಲಿ ಮಾಂಸ ತರುತ್ತಿದ್ದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಟಾಟಾ ಏಸ್ ವಾಹನ ತಪ್ಪಿಸಿಕೊಂಡು ಬಂದು ಕುದ್ರೋಳಿ ಕಸಾಯಿಖಾನೆಗೆ ನುಗ್ಗಿದೆ.



ಈ ಬಗ್ಗೆ ಬಜರಂಗದಳ ಕಾರ್ಯಕರ್ತರು, ಬಂದರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಸಾಯಿಖಾನೆಯಲ್ಲಿ ಪರಿಶೀಲಿಸಿದಾಗ, ಟಾಟಾ ಏಸ್ ವಾಹನದಲ್ಲಿ ಮಾಂಸ ಪತ್ತೆಯಾಗಿದ್ದು ಮಾಂಸ ಸಹಿತ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ. ಅದರಲ್ಲಿದ್ದ ಚಾಲಕ ಪರಾರಿಯಾಗಿದ್ದಾನೆ.
ಮಹಾನಗರ ಪಾಲಿಕೆಯಿಂದ ಅಕ್ರಮ ಗೋಹತ್ಯೆ ತಡೆಯುವ ಸಲುವಾಗಿ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 20 ಬೀಫ್ ಸ್ಟಾಲ್ ಗಳಿದ್ದು ಎಲ್ಲದಕ್ಕೂ ಮಂಗಳೂರಿನ ಅಧಿಕೃತ ಕುದ್ರೋಳಿ ಕಸಾಯಿಖಾನೆಯಿಂದಲೇ ಮಾಂಸ ಪಡೆಯಬೇಕು. ಹೊರ ಜಿಲ್ಲೆಗಳಿಂದ ಮಾಂಸ ತಂದು ಮಾಡುವಂತಿಲ್ಲ. ಜೊತೆಗೆ ಕಸಾಯಿಖಾನೆಯಿಂದ ಮಾಂಸ ಪಡೆದಿದ್ದಕ್ಕೆ ಸೂಕ್ತ ರಶೀದಿ, ದಾಖಲಾತಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪಾಲಿಕೆಯ ಈ ಕ್ರಮದಿಂದಾಗಿ ಒಂದು ಹಂತಕ್ಕೆ ಅಕ್ರಮ ಗೋಸಾಗಾಟ ಮತ್ತು ಗೋಮಾಂಸ ಸಾಗಾಟಕ್ಕೆ ಬ್ರೇಕ್ ಬೀಳಬಹುದೆಂಬ ನಿರೀಕ್ಷೆಯಿದೆ.
A tempo van that was illegally transporting about 2 quintals of beef meat was held by Bunder police at Kudroli after Bajarang Dal Activities informed the cops here on Saturday 24 October 2020.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm