ಬ್ರೇಕಿಂಗ್ ನ್ಯೂಸ್
24-10-20 12:31 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 24: ಅತ್ತ ಮಹಾನಗರ ಪಾಲಿಕೆ ಹೊರ ರಾಜ್ಯದ, ಹೊರ ಜಿಲ್ಲೆಗಳ ಬೀಫ್ ಮಾಂಸ ತಂದು ಮಾರುವಂತಿಲ್ಲ ಎಂದು ಸೂಚನೆ ಕೊಟ್ಟಿರುವಾಗಲೇ ಕುದ್ರೋಳಿ ಕಸಾಯಿಖಾನೆಯಲ್ಲಿ ಹೊರಗಿನಿಂದ ತರುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಕ್ವಿಂಟಾಲ್ ನಷ್ಟು ದನದ ಮಾಂಸವನ್ನು ತರಲಾಗಿದೆ. ವಾಹನದಲ್ಲಿ ಮಾಂಸ ತರುತ್ತಿದ್ದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಟಾಟಾ ಏಸ್ ವಾಹನ ತಪ್ಪಿಸಿಕೊಂಡು ಬಂದು ಕುದ್ರೋಳಿ ಕಸಾಯಿಖಾನೆಗೆ ನುಗ್ಗಿದೆ.



ಈ ಬಗ್ಗೆ ಬಜರಂಗದಳ ಕಾರ್ಯಕರ್ತರು, ಬಂದರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಸಾಯಿಖಾನೆಯಲ್ಲಿ ಪರಿಶೀಲಿಸಿದಾಗ, ಟಾಟಾ ಏಸ್ ವಾಹನದಲ್ಲಿ ಮಾಂಸ ಪತ್ತೆಯಾಗಿದ್ದು ಮಾಂಸ ಸಹಿತ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ. ಅದರಲ್ಲಿದ್ದ ಚಾಲಕ ಪರಾರಿಯಾಗಿದ್ದಾನೆ.
ಮಹಾನಗರ ಪಾಲಿಕೆಯಿಂದ ಅಕ್ರಮ ಗೋಹತ್ಯೆ ತಡೆಯುವ ಸಲುವಾಗಿ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 20 ಬೀಫ್ ಸ್ಟಾಲ್ ಗಳಿದ್ದು ಎಲ್ಲದಕ್ಕೂ ಮಂಗಳೂರಿನ ಅಧಿಕೃತ ಕುದ್ರೋಳಿ ಕಸಾಯಿಖಾನೆಯಿಂದಲೇ ಮಾಂಸ ಪಡೆಯಬೇಕು. ಹೊರ ಜಿಲ್ಲೆಗಳಿಂದ ಮಾಂಸ ತಂದು ಮಾಡುವಂತಿಲ್ಲ. ಜೊತೆಗೆ ಕಸಾಯಿಖಾನೆಯಿಂದ ಮಾಂಸ ಪಡೆದಿದ್ದಕ್ಕೆ ಸೂಕ್ತ ರಶೀದಿ, ದಾಖಲಾತಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪಾಲಿಕೆಯ ಈ ಕ್ರಮದಿಂದಾಗಿ ಒಂದು ಹಂತಕ್ಕೆ ಅಕ್ರಮ ಗೋಸಾಗಾಟ ಮತ್ತು ಗೋಮಾಂಸ ಸಾಗಾಟಕ್ಕೆ ಬ್ರೇಕ್ ಬೀಳಬಹುದೆಂಬ ನಿರೀಕ್ಷೆಯಿದೆ.
A tempo van that was illegally transporting about 2 quintals of beef meat was held by Bunder police at Kudroli after Bajarang Dal Activities informed the cops here on Saturday 24 October 2020.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm