ಬ್ರೇಕಿಂಗ್ ನ್ಯೂಸ್
22-03-23 06:46 pm Mangalore Correspondent ಕ್ರೈಂ
ಮಂಗಳೂರು, ಮಾ.22: 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕ ವೃತ್ತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಶಿಕ್ಷೆ ನೀಡಿದೆ.
ಕಾವೂರು ಠಾಣೆ ವ್ಯಾಪ್ತಿಯ ಮರಕಡ ನಿವಾಸಿ ದಯಾನಂದ ದಾನನ್ನವರ್(30) ಶಿಕ್ಷೆಗೊಳಗಾದ ವ್ಯಕ್ತಿ. ಅಪ್ರಾಪ್ತ ಬಾಲಕಿ ಈತನಿಗೆ ಇನ್ ಸ್ಟಾ ಗ್ರಾಮ್ ಮೂಲಕ ಪರಿಚಯ ಆಗಿದ್ದಳು. ಆನಂತರ, ಬಸ್ ಚಾಲಕನಾಗಿದ್ದ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಬರುವಂತೆ ಪುಸಲಾಯಿಸುತ್ತಿದ್ದ. ಆದರೆ ಬರಲು ಕೇಳದೇ ಇದ್ದಾಗ 2022ರ ಜನವರಿ 28ರಂದು ಮರಕಡದಿಂದ ಆಟೋ ರಿಕ್ಷಾದಲ್ಲಿ ಕರೆದೊಯ್ದಿದ್ದು, ನೇರವಾಗಿ ಹಂಪನಕಟ್ಟೆ ಬಳಿಯ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಆನಂತರ ಆಕೆಯನ್ನು ಮನೆಗೆ ಕಳುಹಿಸಿಕೊಟ್ಟಿದ್ದ.
ಅಲ್ಲದೆ, ಮನೆಯಲ್ಲಿ ಯಾರಿಗೂ ಈ ಬಗ್ಗೆ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ದಯಾನಂದ ಬೆದರಿಕೆ ಒಡ್ಡಿದ್ದ. ಆದರೆ ಬಾಲಕಿ ತನ್ನ ಮೇಲಾದ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದ್ದು ಹೆತ್ತವರು ಕಾವೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, 50 ಸಾವಿರ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ನಾಲ್ಕು ತಿಂಗಳ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಇದಲ್ಲದೆ, ಸಂತ್ರಸ್ತ ಯುವತಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿದೆ. ಅದರಲ್ಲಿ ಒಂದು ಲಕ್ಷ ಕೂಡಲೇ ಆಕೆಯ ಶಿಕ್ಷಣಕ್ಕಾಗಿ ಬಿಡುಗಡೆ ಮಾಡಬೇಕು. ಉಳಿದ ಎರಡು ಲಕ್ಷ ರೂ.ವನ್ನು ಆಕೆಯ ಹೆಸರಲ್ಲಿ ರಾಷ್ಟ್ರೀಯ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಬೇಕು ಎಂದು ಆದೇಶ ಮಾಡಿದ್ದಾರೆ. ಇನ್ಸ್ ಪೆಕ್ಟರ್ ಎಸ್ ಎಚ್ ಭಜಂತ್ರಿ ತನಿಖೆ ನಡೆಸಿ ದೋಷಾರೋಪ ಸಲ್ಲಿಸಿದ್ದರು. ಸರಕಾರದ ಪರವಾಗಿ ವೆಂಕಟರಮಣ ಸ್ವಾಮಿ ವಾದಿಸಿದ್ದರು.
Additional sessions and FTSC-2 (POCSO) court of the city sentenced a man, accused of sexual harassment of minor to 20 years in prison.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm