ಬ್ರೇಕಿಂಗ್ ನ್ಯೂಸ್
22-03-23 06:46 pm Mangalore Correspondent ಕ್ರೈಂ
ಮಂಗಳೂರು, ಮಾ.22: 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕ ವೃತ್ತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಶಿಕ್ಷೆ ನೀಡಿದೆ.
ಕಾವೂರು ಠಾಣೆ ವ್ಯಾಪ್ತಿಯ ಮರಕಡ ನಿವಾಸಿ ದಯಾನಂದ ದಾನನ್ನವರ್(30) ಶಿಕ್ಷೆಗೊಳಗಾದ ವ್ಯಕ್ತಿ. ಅಪ್ರಾಪ್ತ ಬಾಲಕಿ ಈತನಿಗೆ ಇನ್ ಸ್ಟಾ ಗ್ರಾಮ್ ಮೂಲಕ ಪರಿಚಯ ಆಗಿದ್ದಳು. ಆನಂತರ, ಬಸ್ ಚಾಲಕನಾಗಿದ್ದ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಬರುವಂತೆ ಪುಸಲಾಯಿಸುತ್ತಿದ್ದ. ಆದರೆ ಬರಲು ಕೇಳದೇ ಇದ್ದಾಗ 2022ರ ಜನವರಿ 28ರಂದು ಮರಕಡದಿಂದ ಆಟೋ ರಿಕ್ಷಾದಲ್ಲಿ ಕರೆದೊಯ್ದಿದ್ದು, ನೇರವಾಗಿ ಹಂಪನಕಟ್ಟೆ ಬಳಿಯ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಆನಂತರ ಆಕೆಯನ್ನು ಮನೆಗೆ ಕಳುಹಿಸಿಕೊಟ್ಟಿದ್ದ.
ಅಲ್ಲದೆ, ಮನೆಯಲ್ಲಿ ಯಾರಿಗೂ ಈ ಬಗ್ಗೆ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ದಯಾನಂದ ಬೆದರಿಕೆ ಒಡ್ಡಿದ್ದ. ಆದರೆ ಬಾಲಕಿ ತನ್ನ ಮೇಲಾದ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದ್ದು ಹೆತ್ತವರು ಕಾವೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, 50 ಸಾವಿರ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ನಾಲ್ಕು ತಿಂಗಳ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಇದಲ್ಲದೆ, ಸಂತ್ರಸ್ತ ಯುವತಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿದೆ. ಅದರಲ್ಲಿ ಒಂದು ಲಕ್ಷ ಕೂಡಲೇ ಆಕೆಯ ಶಿಕ್ಷಣಕ್ಕಾಗಿ ಬಿಡುಗಡೆ ಮಾಡಬೇಕು. ಉಳಿದ ಎರಡು ಲಕ್ಷ ರೂ.ವನ್ನು ಆಕೆಯ ಹೆಸರಲ್ಲಿ ರಾಷ್ಟ್ರೀಯ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಬೇಕು ಎಂದು ಆದೇಶ ಮಾಡಿದ್ದಾರೆ. ಇನ್ಸ್ ಪೆಕ್ಟರ್ ಎಸ್ ಎಚ್ ಭಜಂತ್ರಿ ತನಿಖೆ ನಡೆಸಿ ದೋಷಾರೋಪ ಸಲ್ಲಿಸಿದ್ದರು. ಸರಕಾರದ ಪರವಾಗಿ ವೆಂಕಟರಮಣ ಸ್ವಾಮಿ ವಾದಿಸಿದ್ದರು.
Additional sessions and FTSC-2 (POCSO) court of the city sentenced a man, accused of sexual harassment of minor to 20 years in prison.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm