ಬ್ರೇಕಿಂಗ್ ನ್ಯೂಸ್
22-03-23 06:46 pm Mangalore Correspondent ಕ್ರೈಂ
ಮಂಗಳೂರು, ಮಾ.22: 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕ ವೃತ್ತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಶಿಕ್ಷೆ ನೀಡಿದೆ.
ಕಾವೂರು ಠಾಣೆ ವ್ಯಾಪ್ತಿಯ ಮರಕಡ ನಿವಾಸಿ ದಯಾನಂದ ದಾನನ್ನವರ್(30) ಶಿಕ್ಷೆಗೊಳಗಾದ ವ್ಯಕ್ತಿ. ಅಪ್ರಾಪ್ತ ಬಾಲಕಿ ಈತನಿಗೆ ಇನ್ ಸ್ಟಾ ಗ್ರಾಮ್ ಮೂಲಕ ಪರಿಚಯ ಆಗಿದ್ದಳು. ಆನಂತರ, ಬಸ್ ಚಾಲಕನಾಗಿದ್ದ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಬರುವಂತೆ ಪುಸಲಾಯಿಸುತ್ತಿದ್ದ. ಆದರೆ ಬರಲು ಕೇಳದೇ ಇದ್ದಾಗ 2022ರ ಜನವರಿ 28ರಂದು ಮರಕಡದಿಂದ ಆಟೋ ರಿಕ್ಷಾದಲ್ಲಿ ಕರೆದೊಯ್ದಿದ್ದು, ನೇರವಾಗಿ ಹಂಪನಕಟ್ಟೆ ಬಳಿಯ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಆನಂತರ ಆಕೆಯನ್ನು ಮನೆಗೆ ಕಳುಹಿಸಿಕೊಟ್ಟಿದ್ದ.
ಅಲ್ಲದೆ, ಮನೆಯಲ್ಲಿ ಯಾರಿಗೂ ಈ ಬಗ್ಗೆ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ದಯಾನಂದ ಬೆದರಿಕೆ ಒಡ್ಡಿದ್ದ. ಆದರೆ ಬಾಲಕಿ ತನ್ನ ಮೇಲಾದ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದ್ದು ಹೆತ್ತವರು ಕಾವೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, 50 ಸಾವಿರ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ನಾಲ್ಕು ತಿಂಗಳ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಇದಲ್ಲದೆ, ಸಂತ್ರಸ್ತ ಯುವತಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿದೆ. ಅದರಲ್ಲಿ ಒಂದು ಲಕ್ಷ ಕೂಡಲೇ ಆಕೆಯ ಶಿಕ್ಷಣಕ್ಕಾಗಿ ಬಿಡುಗಡೆ ಮಾಡಬೇಕು. ಉಳಿದ ಎರಡು ಲಕ್ಷ ರೂ.ವನ್ನು ಆಕೆಯ ಹೆಸರಲ್ಲಿ ರಾಷ್ಟ್ರೀಯ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಬೇಕು ಎಂದು ಆದೇಶ ಮಾಡಿದ್ದಾರೆ. ಇನ್ಸ್ ಪೆಕ್ಟರ್ ಎಸ್ ಎಚ್ ಭಜಂತ್ರಿ ತನಿಖೆ ನಡೆಸಿ ದೋಷಾರೋಪ ಸಲ್ಲಿಸಿದ್ದರು. ಸರಕಾರದ ಪರವಾಗಿ ವೆಂಕಟರಮಣ ಸ್ವಾಮಿ ವಾದಿಸಿದ್ದರು.
Additional sessions and FTSC-2 (POCSO) court of the city sentenced a man, accused of sexual harassment of minor to 20 years in prison.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm