ಬ್ರೇಕಿಂಗ್ ನ್ಯೂಸ್
23-03-23 02:16 pm Bangalore Correspondent ಕ್ರೈಂ
ಬೆಂಗಳೂರು, ಮಾ.23 : ಪೊಲೀಸರೇ ಆರೋಪಿಯನ್ನು ಬಂಧಿಸಿ ಅಪಹರಣದ ನಾಟಕವಾಡಿದ್ದಲ್ಲದೆ, ಕುಟುಂಬಕ್ಕೆ 40 ಲಕ್ಷ ರೂ.ಗೆ ಬೇಡಿಕೆಯಿಟ್ಟ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮಾರತ್ ಹಳ್ಳಿ ಠಾಣೆಯ ಪಿಎಸ್ಐ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಾ.18ರಂದು ಹುಲಿ ಉಗುರು, ಚರ್ಮವನ್ನು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಆದರೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸದೇ ಪ್ರತ್ಯೇಕ ಜಾಗದಲ್ಲಿ ಬಚ್ಚಿಟ್ಟಿದ್ದರು. ಆನಂತರ ಆರೋಪಿ ಸಂಬಂಧಿಕರಿಗೆ ಕರೆ ಮಾಡಿ 40 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು. ಇದರಿಂದ ಗಾಬರಿಗೊಂಡ ಆರೋಪಿ ಕುಟುಂಬಸ್ಥರು ಬಾಗಲೂರು ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಬಾಗಲೂರು ಪೊಲೀಸರು ಕಿಡ್ನಾಪ್ ಮಾಡಿ ಕರೆ ಮಾಡಿದ ಜಾಡು ಆಧರಿಸಿ ಪತ್ತೆಗೆ ಜಾಲ ಬೀಸಿದ್ದರು.
ಬಾಗಲೂರು ಪೊಲೀಸರು ತನಿಖೆ ನಡೆಸಿದಾಗ, ಕಿಡ್ನಾಪ್ ಮಾಡಿದ್ದವರು ಮಾರತಹಳ್ಳಿ ಠಾಣೆ ಪಿಎಸ್ಐ ರಂಗೇಶ್ ಮತ್ತು ಹೆಡ್ ಕಾನ್ಸ್ಟೇಬಲ್ ಹರೀಶ್ ಎಂಬುದು ತಿಳಿದುಬಂದಿದೆ. ಪ್ರಕರಣದಲ್ಲಿ ಆರೋಪಿಯನ್ನ ಇಬ್ಬರು ಪೊಲೀಸರು ಕರೆದೊಯ್ದಿದ್ದರು. ಈ ವೇಳೆ, ಪಿಎಸ್ಐ ರಂಗೇಶ್ ಆರೋಪಿ ತಲೆಗೆ ಗನ್ ಇಟ್ಟು ಹಣ ಕೊಡುವಂತೆ ಅವರ ಕಡೆಯವರಿಗೆ ಕರೆ ಮಾಡಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಪೊಲೀಸರೇ ಕಿಡ್ನಾಪ್ ಮಾಡಿದ್ದಾರೆ ಎಂಬುದರ ಬಗ್ಗೆ ಕಮಿಷನರ್ ಪ್ರತಾಪ್ ರೆಡ್ಡಿಗೆ ಮಾಹಿತಿ ಬಂದಿದ್ದು ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಕೊಟ್ಟಿದ್ದರು.
ಕಮಿಷನರ್ ಸೂಚನೆ ಮೇರೆಗೆ ಮಂಗಳವಾರ ಹೆಡ್ ಕಾನ್ಸ್ಟೇಬಲ್ ಹರೀಶ್ನನ್ನು ಬಂಧಿಸಿರುವ ಬಾಗಲೂರು ಪೊಲೀಸರು ತಲೆಮರೆಸಿಕೊಂಡಿರುವ ಪಿಎಸ್ಐ ರಂಗೇಶ್ಗಾಗಿ ತೀವ್ರ ಶೋಧ ನಡೆಸಿದ್ದಾರೆ. ಬಾಗಲೂರು ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಎಂ. ಶಿವರಾಮಯ್ಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ರಾಮಾಂಜನಿ ಎಂಬಾತನನ್ನು ಅಪಹರಿಸಿ ಒಯ್ದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖವಾಗಿದೆ. ಶಬ್ಬೀರ್, ಜಾಕೀರ್, ಪಿಎಸ್ಐ ರಂಗೇಶ್, ಕಾನ್ಸ್ಟೇಬಲ್ ಹರೀಶ್ ಕೆ.ಎಲ್, ಮಹದೇವ ನಾಯಕ್, ಮಹೇಶ್ ಮೇಲೆ ದೂರು ದಾಖಲಾಗಿದೆ.
ಆರೋಪಿ ಎ- 2 ಹರೀಶ್, ಎ-3 ಆರೋಪಿ ಶಬ್ಬೀರ್ ಹಾಗೂ ಎ-4 ಆರೋಪಿ ಜಾಕೀರ್ ಸೇರಿ ಮೂವರನ್ನು ಬಾಗಲೂರು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.
Two police officers in Bengaluru have been arrested in connection with the kidnapping a man and demanding Rs 40 lakhs from his family for his release, authorities said on Thursday. The two were identified as Sub-Inspector Rangesh and head constable Harish. The incident had taken place on March 18 and came to light now.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am