ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ 5 ಲಕ್ಷ ನಗದು ಹಣ ಪತ್ತೆ ; ಕಾರು ಸಹಿತ ಪೊಲೀಸ್ ವಶಕ್ಕೆ 

27-03-23 02:35 pm       Udupi Correspondent   ಕ್ರೈಂ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಹಣ ಪತ್ತೆಯಾಗಿದ್ದು ಅವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಉಡುಪಿ, ಮಾ.27 : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಹಣ ಪತ್ತೆಯಾಗಿದ್ದು ಅವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಪಡುಬಿದ್ರಿ ಪೊಲೀಸ್ ಠಾಣೆ ಎಸ್ಐ ಪುರುಷೋತ್ತಮ ಅವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಭಾನುವಾರ ಕರ್ತವ್ಯದಲ್ಲಿದ್ದರು. ಸಂಜೆ 4:35ರ ವೇಳೆಗೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೊಟಾ ಗ್ಲಾಂಝಾ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. 

ತಪಾಸಣೆ ವೇಳೆ, ಚಾಲಕನ ಎಡ ಬದಿಯ ಟೂಲ್ ಬಾಕ್ಸ್ ಒಳಗಡೆ ಕೈ ಚೀಲ ದೊರಕ್ಕಿದ್ದು, ಅದನ್ನು ಪರಿಶೀಲಿಸಿದಾಗ 500 ರೂಪಾಯಿ ಮುಖ ಬೆಲೆಯ ನೋಟುಗಳ ಬಂಡಲ್ ಕಂಡುಬಂದಿದೆ. ಹಣದ ಕುರಿತು ಕಾರಿನ ಚಾಲಕ ಅಹಮ್ಮದ್ ಕಬೀರ್ ಹಾಗೂ ಕಾರಿನಲ್ಲಿದ್ದ ಅಬ್ದುಲ್ ಖಾದರ್ ಜೈಲಾನಿ ಅವರನ್ನು ವಿಚಾರಿಸಿದಾಗ, ಹಣದ ಬಗ್ಗೆ ದಾಖಲೆ ಇಲ್ಲದೇ ಇದ್ದುದರಿಂದ ಅದರಲ್ಲಿದ್ದ 5 ಲಕ್ಷ ರೂ. ನಗದು ಹಣ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Illegal cash worth 5 lakhs sezied at Hejamady check post in Mangalore.