ಬ್ರೇಕಿಂಗ್ ನ್ಯೂಸ್
27-03-23 10:08 pm Mangalore Correspondent ಕ್ರೈಂ
ಮಂಗಳೂರು, ಮಾ.27: ಸುರತ್ಕಲ್ ಬಳಿಯ ಹೊಸಬೆಟ್ಟಿನ ಕುಳಾಯಿ ಎಂಬಲ್ಲಿ ಬಾಡಿಗೆ ಮನೆ ಪಡೆದು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸುರತ್ಕಲ್ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಮೀನಕಳಿಯ ನಿವಾಸಿ ವಿಕ್ರಂ ಅಲಿಯಾಸ್ ಜಯರಾಂ(30), ಕೊಡಿಯಾಲಬೈಲಿನ ಸತೀಶ್(50), ಕುಳಾಯಿ ಹೊನ್ನಕಟ್ಟೆಯ ಸರ್ಫರಾಜ್(37), ಬೈಕಂಪಾಡಿಯ ಅಕ್ಷಯ್ (33) ಬಂಧಿತರು. ಇವರು ಕುಳಾಯಿ ಗ್ರಾಮದ ಬಾಡಿಗೆ ಕೊಠಡಿಯಲ್ಲಿದ್ದುಕೊಂಡು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದರು. ಇವರಿಂದ 790 ಗ್ರಾಮ್ ಗಾಂಜಾ, ನಾಲ್ಕು ಮೊಬೈಲ್ ಫೋನ್, ಒಂದು ಆಟೋ ರಿಕ್ಷಾ, ತೂಕ ಮಾಪನ ವಶಕ್ಕೆ ಪಡೆದಿದ್ದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಲೇಜು ಬಳಿ ಗಾಂಜಾ ಮಾರಾಟ
ಇನ್ನೊಂದು ಪ್ರಕರಣದಲ್ಲಿ ಸುರತ್ಕಲ್ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರಿಸ್ಸಾ ಮೂಲದ ಚಿಂತಾಮಣಿ ಮತ್ತು ದೂಬ ಎಂಬವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ 3 ಕೇಜಿ 180 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರ ಸೆರೆ
ಸೋಮವಾರ ಸಂಜೆ 4.30ಕ್ಕೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಜಂಕ್ಷನ್ ಬಳಿ ಮಟ್ಕಾ ಆಟವಾಡುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಅಬುಬಕ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿಂದ 750 ರೂ. ಹಣ ವಶಕ್ಕೆ ಪಡೆಯಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಬೋಳಿಯಾರು ಜಂಕ್ಷನ್ ಬಳಿ ಮಟ್ಕಾ ದಂಧೆ ನಡೆಸುತ್ತ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಪ್ರವೀಣ್ ಎಂಬಾತನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಬಳಿಯಿಂದ 1650 ರೂ. ಹಣ ವಶಕ್ಕೆ ಪಡೆಯಲಾಗಿದೆ.
Four arrested for sale of Ganja in rented house at Kulai in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm