ಬ್ರೇಕಿಂಗ್ ನ್ಯೂಸ್
27-03-23 10:08 pm Mangalore Correspondent ಕ್ರೈಂ
ಮಂಗಳೂರು, ಮಾ.27: ಸುರತ್ಕಲ್ ಬಳಿಯ ಹೊಸಬೆಟ್ಟಿನ ಕುಳಾಯಿ ಎಂಬಲ್ಲಿ ಬಾಡಿಗೆ ಮನೆ ಪಡೆದು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸುರತ್ಕಲ್ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಮೀನಕಳಿಯ ನಿವಾಸಿ ವಿಕ್ರಂ ಅಲಿಯಾಸ್ ಜಯರಾಂ(30), ಕೊಡಿಯಾಲಬೈಲಿನ ಸತೀಶ್(50), ಕುಳಾಯಿ ಹೊನ್ನಕಟ್ಟೆಯ ಸರ್ಫರಾಜ್(37), ಬೈಕಂಪಾಡಿಯ ಅಕ್ಷಯ್ (33) ಬಂಧಿತರು. ಇವರು ಕುಳಾಯಿ ಗ್ರಾಮದ ಬಾಡಿಗೆ ಕೊಠಡಿಯಲ್ಲಿದ್ದುಕೊಂಡು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದರು. ಇವರಿಂದ 790 ಗ್ರಾಮ್ ಗಾಂಜಾ, ನಾಲ್ಕು ಮೊಬೈಲ್ ಫೋನ್, ಒಂದು ಆಟೋ ರಿಕ್ಷಾ, ತೂಕ ಮಾಪನ ವಶಕ್ಕೆ ಪಡೆದಿದ್ದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಲೇಜು ಬಳಿ ಗಾಂಜಾ ಮಾರಾಟ
ಇನ್ನೊಂದು ಪ್ರಕರಣದಲ್ಲಿ ಸುರತ್ಕಲ್ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರಿಸ್ಸಾ ಮೂಲದ ಚಿಂತಾಮಣಿ ಮತ್ತು ದೂಬ ಎಂಬವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ 3 ಕೇಜಿ 180 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರ ಸೆರೆ
ಸೋಮವಾರ ಸಂಜೆ 4.30ಕ್ಕೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಜಂಕ್ಷನ್ ಬಳಿ ಮಟ್ಕಾ ಆಟವಾಡುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಅಬುಬಕ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿಂದ 750 ರೂ. ಹಣ ವಶಕ್ಕೆ ಪಡೆಯಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಬೋಳಿಯಾರು ಜಂಕ್ಷನ್ ಬಳಿ ಮಟ್ಕಾ ದಂಧೆ ನಡೆಸುತ್ತ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಪ್ರವೀಣ್ ಎಂಬಾತನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಬಳಿಯಿಂದ 1650 ರೂ. ಹಣ ವಶಕ್ಕೆ ಪಡೆಯಲಾಗಿದೆ.
Four arrested for sale of Ganja in rented house at Kulai in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm