ಬ್ರೇಕಿಂಗ್ ನ್ಯೂಸ್
29-03-23 09:31 pm Mangalore Correspondent ಕ್ರೈಂ
ಉಳ್ಳಾಲ, ಮಾ.29 : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಕಳೆದ ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ ಮತ್ತು ಯುವತಿ ಬೈಕಲ್ಲಿ ತೆರಳುತ್ತಿದ್ದ ವೇಳೆ ಎರಡು ಸ್ಕೂಟರಲ್ಲಿ ಬಂದ ಮೂವರು ಖದೀಮರು ಅಡ್ಡ ಗಟ್ಟಿ ಯುವತಿಯ ಕೈಯಲ್ಲಿದ್ದ ಬೆಲೆ ಬಾಳುವ ಐ-ಫೋನ್ ಸುಲಿಗೆ ಮಾಡಿದ್ದಲ್ಲದೆ, ಮೋಟಾರು ಬೈಕನ್ನೂ ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ನೊಂದ ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಉಳ್ಳಾಲ ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಹಮ್ಮದ್ ಉಬೈದುಲ್ಲಾ ಅಲಿಯಾಸ್ ಉಬ್ಬಿ(33), ಉಳ್ಳಾಲ ,ಮೇಲಂಗಡಿ ನಿವಾಸಿ ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 2 ಸ್ಕೂಟರ್ ಗಳು, ಸುಲಿಗೆ ನಡೆಸಿದ್ದ ಐಫೋನ್ ಮತ್ತು ಯಮಾಹ ಮೋಟಾರು ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಆರೋಪಿಗಳನ್ನು ನಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್ ಮಾರ್ಗದರ್ಶನದ ಮೇರೆಗೆ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಮತ್ತು ಉಪ ನಿರೀಕ್ಷಕರುಗಳಾದ ಕೃಷ್ಣ ಕೆ.ಹೆಚ್ , ಸಂತೋಷ್ ಮತ್ತು ಪಿಸಿಗಳಾದ ಪ್ರವೀಣ ಶೆಟ್ಟಿ, ಅಶೋಕ್, ವಾಸುದೇವ ಸಿಬ್ಬಂದಿಯ ತಂಡ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Three arrested by Ullal police for robbing mobile phones and bike from couple at Uchila in Mangalore. The arrested had threatened the couple and flee the spot by snatching their mobile phones and bike.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm