ಬ್ರೇಕಿಂಗ್ ನ್ಯೂಸ್
01-04-23 01:10 pm HK News Desk ಕ್ರೈಂ
ಚಿಕ್ಕಮಗಳೂರು , ಏ 01: ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ದಾಖಲೆ ಇಲ್ಲದ ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿ ಸೀಜ್ ಮಾಡಲಾಗಿದೆ. ಚಿನ್ನದ ಮೌಲ್ಯ 6 ಕೋಟಿ 44 ಲಕ್ಷ ರೂ. ಎನ್ನಲಾಗಿದೆ.
ಶಿವಮೊಗ್ಗ-ಚಿಕ್ಕಮಗಳೂರು ಗಡಿ ಗ್ರಾಮವಾದ ಎಂ.ಸಿ.ಹಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ ಪೋಸ್ಟ್ ನಲ್ಲಿ ಸೀಜ್ ಮಾಡಲಾಗಿದೆ.
ಇನ್ನು ಶಿವಮೊಗ್ಗ ನಗರದ ಹೊರವಲಯದ ಅರಕೆರೆ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೇ 1.69 ಕೋಟಿ ನಗದು ಪತ್ತೆಯಾಗಿದ್ದು, ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರಕ್ಕೆ ಬ್ಯಾಂಕ್ ಗಳಿಗೆ ಹಣ ಸಾಗಿಸುವ ಮಾದರಿಯ ವಾಹನದಲ್ಲಿ ಭಾರಿ ಪ್ರಮಾಣದ ಹಣ ಪತ್ತೆಯಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪತ್ತೆಯಾದ ಹಣಕ್ಕೆ ಯಾವುದೇ ದಾಖಲಾತಿ ಇಲ್ಲದ ಕಾರಣಕ್ಕೆ ಹಣವನ್ನು ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೊರವಲಯದಲ್ಲಿ ಒಟ್ಟು 36 ಚೆಕ್ ಪೋಸ್ಟ್ ರಚಿಸಿದ್ದು, ನಿರಂತರ ವಾಹನಗಳ ಪರಿಶೀಲನೆ ಮಾಡಲಾಗುತ್ತಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ಪನಕಟ್ಟೆ ಚೆಕ್ಪೋಸ್ಟ್ ಬಳಿ ಘಟನೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಅಲ್ಲದೆ ಮೂವರು ಪೊಲೀಸರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ಮೂಲದ ಯಶ್ವಂತ್ ಗೊಂಡ, ಹೊನ್ನಾವರದ ಗುಣವಂತೆಯ ಶ್ರೀನಿವಾಸ್ ಗೌಡ, ರಘು ನಾಯ್ಕ ಎಂಬವರು ಇಕೋ ಕಾರಿನಲ್ಲಿ ಮುರ್ಡೇಶ್ವರಕ್ಕೆ ಹಣ ಕೊಂಡೊಯ್ಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಲಬುರಗಿಯ ಫರಹತ್ತಬಾದ್ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸ್ತಿದ್ದ 1 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರವಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
About 17 kg gold worth Rs 6.44 crore was found inside a logistic vehicle at M C Halli check post in Traikere of Chikkamagaluru on Friday.
According to the police, the gold in question was found inside a vehicle belonging to Sequel Logistics. The gold was being transported without any suitable documents. The gold has been seized. A case has been registered at Tarikere station. Shivamogga 1.69 crores cash seized.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm