ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm