ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm