ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm