ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm