ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm