ಬುದ್ಧಿಮಾಂದ್ಯ ಮಹಿಳೆಯ ಅತ್ಯಾಚಾರ ; ಆರೋಪಿ ಪರಾರಿ, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು 

03-04-23 09:58 pm       Mangalore Correspondent   ಕ್ರೈಂ

ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. 

ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. 

ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. 

ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.

Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.