ಬ್ರೇಕಿಂಗ್ ನ್ಯೂಸ್
04-04-23 12:05 pm Mangalore Correspondent ಕ್ರೈಂ
ಮಂಗಳೂರು, ಎ.4: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದಾನೆಂಬ ಮಾಹಿತಿ ಆಧರಿಸಿ ಕದ್ರಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನು ಶಿಶಿರ್ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ವಾಸವಿದ್ದ ಶಿಶಿರ್ ಎಂಬಾತ ಬಂಧಿತ. ಆತನನ್ನು ತನಿಖೆ ನಡೆಸಿದಾಗ ಆ್ಯಂಡ್ರೂ ರೊಡ್ರಿಗಸ್ ಎಂಬಾತ ಈ ಪಿಸ್ತೂಲನ್ನು ತನಗೆ ನೀಡಿದ್ದಾಗಿ ತಿಳಿಸಿದ್ದಾನೆ.
ಆ್ಯಂಡ್ರೂ ರೊಡ್ರಿಗಸ್, 2014ರಲ್ಲಿ ಹಂಪನಕಟ್ಟೆಯಲ್ಲಿ ನಡೆದ ಕುಮಾರ್ ಎಂಬವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗೋವಾ ವಿಮಾನ ನಿಲ್ದಾಣದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿತ್ತು. ಮಂಗಳೂರಿನಲ್ಲಿ ಜೈಲಿನಲ್ಲಿದ್ದ ರೋಡ್ರಿಗಸ್, ಬಳಿಕ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರಿನ ಕೋರ್ಟಿಗೆ ಹಾಜರಾಗಲು ಬಂದಿದ್ದಾಗ ರೋಡ್ರಿಗಸ್ ತನ್ನಲ್ಲಿದ್ದ ಪಿಸ್ತೂಲನ್ನು ಶಿಶಿರ್ ಕೈಗೆ ನೀಡಿದ್ದ.
ಶಿಶಿರ್ ಕೂಡ ಅಪರಾಧ ಹಿನ್ನೆಲೆಯ ವ್ಯಕ್ತಿಯಾಗಿದ್ದು ಬಂದರು, ಕಾವೂರು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಎದುರಿಸುತ್ತಿದ್ದ. ಮೂಲತಃ ಉಡುಪಿ ನಗರದ ಕೋರ್ಟ್ ರಸ್ತೆಯ ನಿವಾಸಿಯಾಗಿದ್ದ ಶಿಶಿರ್ ತನ್ನ ಅಪರಾಧ ಚಟುವಟಿಕೆ ಕಾರಣದಿಂದ ಮನೆಯವರಿಂದ ದೂರವಾಗಿದ್ದ. ಆನಂತರ, ಮಂಗಳೂರಿಗೆ ಬಂದು ಇಲ್ಲಿ ಒಬ್ಬಂಟಿಯಾಗೇ ನೆಲೆಸಿದ್ದ. ಇದೀಗ ಖಚಿತ ಮಾಹಿತಿ ಆಧರಿಸಿ ಪಿಸ್ತೂಲ್ ಹೊಂದಿದ್ದ ಕಾರಣಕ್ಕೆ ಶಿಶಿರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಬಂಧಿಸಿದ್ದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Old Accused arrested with unlicensed Gun at Kadri by Kadri Police in Mangalore. The arrested has been identified as Shishir. The gun that he was using was said to be of Andrew Rodrigues who was a murder accused. When Andrew was taken to the court the gun was handed over to Shishir.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm