ಬ್ರೇಕಿಂಗ್ ನ್ಯೂಸ್
04-04-23 12:05 pm Mangalore Correspondent ಕ್ರೈಂ
ಮಂಗಳೂರು, ಎ.4: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದಾನೆಂಬ ಮಾಹಿತಿ ಆಧರಿಸಿ ಕದ್ರಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನು ಶಿಶಿರ್ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ವಾಸವಿದ್ದ ಶಿಶಿರ್ ಎಂಬಾತ ಬಂಧಿತ. ಆತನನ್ನು ತನಿಖೆ ನಡೆಸಿದಾಗ ಆ್ಯಂಡ್ರೂ ರೊಡ್ರಿಗಸ್ ಎಂಬಾತ ಈ ಪಿಸ್ತೂಲನ್ನು ತನಗೆ ನೀಡಿದ್ದಾಗಿ ತಿಳಿಸಿದ್ದಾನೆ.
ಆ್ಯಂಡ್ರೂ ರೊಡ್ರಿಗಸ್, 2014ರಲ್ಲಿ ಹಂಪನಕಟ್ಟೆಯಲ್ಲಿ ನಡೆದ ಕುಮಾರ್ ಎಂಬವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗೋವಾ ವಿಮಾನ ನಿಲ್ದಾಣದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿತ್ತು. ಮಂಗಳೂರಿನಲ್ಲಿ ಜೈಲಿನಲ್ಲಿದ್ದ ರೋಡ್ರಿಗಸ್, ಬಳಿಕ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರಿನ ಕೋರ್ಟಿಗೆ ಹಾಜರಾಗಲು ಬಂದಿದ್ದಾಗ ರೋಡ್ರಿಗಸ್ ತನ್ನಲ್ಲಿದ್ದ ಪಿಸ್ತೂಲನ್ನು ಶಿಶಿರ್ ಕೈಗೆ ನೀಡಿದ್ದ.
ಶಿಶಿರ್ ಕೂಡ ಅಪರಾಧ ಹಿನ್ನೆಲೆಯ ವ್ಯಕ್ತಿಯಾಗಿದ್ದು ಬಂದರು, ಕಾವೂರು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಎದುರಿಸುತ್ತಿದ್ದ. ಮೂಲತಃ ಉಡುಪಿ ನಗರದ ಕೋರ್ಟ್ ರಸ್ತೆಯ ನಿವಾಸಿಯಾಗಿದ್ದ ಶಿಶಿರ್ ತನ್ನ ಅಪರಾಧ ಚಟುವಟಿಕೆ ಕಾರಣದಿಂದ ಮನೆಯವರಿಂದ ದೂರವಾಗಿದ್ದ. ಆನಂತರ, ಮಂಗಳೂರಿಗೆ ಬಂದು ಇಲ್ಲಿ ಒಬ್ಬಂಟಿಯಾಗೇ ನೆಲೆಸಿದ್ದ. ಇದೀಗ ಖಚಿತ ಮಾಹಿತಿ ಆಧರಿಸಿ ಪಿಸ್ತೂಲ್ ಹೊಂದಿದ್ದ ಕಾರಣಕ್ಕೆ ಶಿಶಿರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಬಂಧಿಸಿದ್ದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Old Accused arrested with unlicensed Gun at Kadri by Kadri Police in Mangalore. The arrested has been identified as Shishir. The gun that he was using was said to be of Andrew Rodrigues who was a murder accused. When Andrew was taken to the court the gun was handed over to Shishir.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm