ಬ್ರೇಕಿಂಗ್ ನ್ಯೂಸ್
05-04-23 10:18 pm Bangalore Correspondent ಕ್ರೈಂ
ಬೆಂಗಳೂರು, ಎ.5 : ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಆಕೆಯನ್ನು ಪ್ರಿಯಕರನೇ ಕೊಲೆಗೈದು ಸುಟ್ಟು ಹಾಕಿದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಮಂಜು (32) ಕೊಲೆಯಾದ ಮಹಿಳೆ.
ಬೆಂಗಳೂರು ಹೊರವಲಯದ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರದಲ್ಲಿ ಘಟನೆ ನಡೆದಿದೆ. ದೇಹವನ್ನು ಕತ್ತರಿಸಿ ನಿರ್ಜನ ಪ್ರದೇಶ ಸುಟ್ಟು ಹಾಕಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಲ್ಲಲ್ಲಿ ಚದುರಿ ಬಿದ್ದ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ.
ಮಂಜುವನ್ನು ಕೊಲೆಗೈದಿರುವ ಬಗ್ಗೆ ಸಂಬಂಧಿಕರು ಆರೋಪಿಸಿದ್ದಾರೆ. ಈ ಕುರಿತು ಹೆಬ್ಬಗೋಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜು ಜತೆ 10 ವರ್ಷಗಳಿಂದ ನಾರಾಯಣ್ ಎಂಬಾತ ಅನೈತಿಕ ಸಂಬಂಧದಲ್ಲಿದ್ದು ಆತನೇ ಕೊಲೆಗೈದ ಆರೋಪ ಕೇಳಿಬಂದಿದೆ. ನಾರಾಯಣ್ ಸಂಪಿಗೆನಗರದಲ್ಲಿ ಕಿರಾಣಿ ಅಂಗಡಿ ನಡೆಸ್ತಿದ್ದರೆ, ಮಂಜು ಅಪಾರ್ಟ್ಮೆಂಟ್ ಗಳಲ್ಲಿ ಮನೆಕೆಲಸ ಮಾಡುತ್ತಿದ್ದಳು. ಕೆಲವು ದಿನಗಳ ಹಿಂದೆ ಮಂಜು ಜೊತೆ ನಾರಾಯಣ್ ಜಗಳವಾಡಿದ್ದು ನೀನು ಕೆಲಸಕ್ಕೆ ಹೋಗಬಾರದೆಂದು ತಾಕೀತು ಮಾಡಿದ್ದ ಎನ್ನಲಾಗಿದೆ. ಆದರೆ ನಾರಾಯಣ್ ಮಾತನ್ನು ಲೆಕ್ಕಿಸದೆ ಮಂಜು ಕೆಲಸಕ್ಕೆ ಹೋಗಿದ್ದಳು.
ಮಾ.29ರಿಂದ ಮಹಿಳೆ ಕಾಣೆಯಾಗಿದ್ದು ಹೆಬ್ಬಗೋಡಿ ಠಾಣೆಗೆ ತಂಗಿ ಲಕ್ಷ್ಮಿ ನಾಪತ್ತೆ ದೂರು ನೀಡಿದ್ದಳು. ಈ ನಡುವೆ, ನಿರ್ಜನ ಪ್ರದೇಶದಲ್ಲಿ ಸುಟ್ಟು ಹೋಗಿದ್ದ ಸ್ಥಿತಿಯಲ್ಲಿ ಶವ ಸಿಕ್ಕಿತ್ತು. ಸಂಶಯದಲ್ಲಿ ಮಂಜು ತಂಗಿ ಲಕ್ಷ್ಮಿಯನ್ನು ಕರೆದು ಪೊಲೀಸರು ತೋರಿಸಿದ್ದು ಚಪ್ಪಲಿ, ಕೈ ಬಳೆ ಕಂಡು ದೇಹದ ಗುರುತು ಹಿಡಿದಿದ್ದಾಳೆ. ಇದೀಗ ಸಂಪಿಗೆನಗರ ನಿವಾಸಿ ನಾರಾಯಣ್ ಮೇಲೆ ಕೊಲೆ ಆರೋಪ ದಾಖಲಾಗಿದೆ. ಇದೇ ವೇಳೆ, ಆರೋಪಿ ನಾರಾಯಣ್ ನಾಪತ್ತೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore married woman murdered by boyfriend over work issue. The deceased has been knows as Manju. Manju and Narayan had illecit affair from past 10 years. Manju was burnt and cut into pieces aftee manju began to to work which Narayan didn't like.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm