ಕೊಡಗು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕಾರಿನ ಮೇಲೆ ಗುಂಡಿನ ದಾಳಿ ; ಬಚಾವ್ ಆದ ವಕೀಲ 

13-04-23 02:14 pm       HK News Desk   ಕ್ರೈಂ

ಕೊಡಗಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.

ಮಡಿಕೇರಿ, ಎ.13: ಕೊಡಗಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.

ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿ ಸಮೀಪ ಗುಂಡಿನ ದಾಳಿಯಾಗಿದೆ. ಕಾರಿಗೆ ಗುಂಡು ತಗುಲಿದ್ದು, ಕೃಷ್ಣಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಿಡಗಳ ಮರೆಯಿಂದ ಆರೋಪಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಹಾಗೂ ವಕೀಲ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರನ್ನು ಚೆಟ್ಟಳ್ಳಿಯ ನಿವಾಸಕ್ಕೆ ಬಿಟ್ಟು ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿದಾಗ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್‍ಪಿ ಅಧ್ಯಕ್ಷ ಬಚಾವ್ ಆಗಿದ್ದಾರೆ.

ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Kodagu VHP president and lawyer Krishnamurthi escapes getting shot