ಬ್ರೇಕಿಂಗ್ ನ್ಯೂಸ್
            
                        26-10-20 02:10 pm Udupi Correspondent ಕ್ರೈಂ
            ಉಡುಪಿ, ಅಕ್ಟೋಬರ್ 26: ಯುವತಿಯನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದ ಯುವಕನನ್ನು ಹಿರಿಯಡ್ಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಸ್ವಸ್ಥಳಾಗಿದ್ದ ಯುವತಿಯನ್ನು ಶನಿವಾರ ಸಂಜೆ ಗಾಂಧಿ ಆಸ್ಪತ್ರೆಗೆ ಕರೆತಂದಿದ್ದ ಯುವಕ ಪ್ರಶಾಂತ್ ಕುಂದರ್ ಎಂಬಾತ ಅಲ್ಲಿಂದ ದಿಢೀರ್ ನಾಪತ್ತೆಯಾಗಿದ್ದ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಳು. ಯುವತಿಯ ಕುತ್ತಿಗೆಯ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದ ರೀತಿ ಇದ್ದುದರಿಂದ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಯುವತಿ ಮನೆಯವರು ಆಘಾತಗೊಂಡಿದ್ದಲ್ಲದೆ, ಪುತ್ರಿಯ ಸಾವಿನ ಬಗ್ಗೆ ಏನು ಹೇಳುವುದೆಂದು ತೋಚದಾಗಿದ್ದರು.
ಯುವತಿ ಸಾವಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅನುಮಾನ ಕೇಳಿಬರುತ್ತಿದ್ದರೂ, ಮನೆಯವರು ಶಂಕೆ ವ್ಯಕ್ತಪಡಿಸಿ ದೂರನ್ನು ದಾಖಲಿಸಿಲ್ಲ ಎನ್ನುವ ವಿಚಾರ ಗೊತ್ತಾಗಿದೆ. ಹೀಗಾಗಿ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುವ ಬಗ್ಗೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಅಲ್ಲದೆ, ಬಂಧನ ಅಂತ ತೋರಿಸುವುದಕ್ಕೂ ಸಾಧ್ಯವಾಗಲ್ಲ ಎನ್ನುತ್ತಿದ್ದಾರೆ. ಸಾರ್ವಜನಿಕ ಅನುಮಾನಕ್ಕೆ ಕಾರಣವಾದ ಪ್ರಕರಣದಲ್ಲಿ ಪೊಲೀಸರಿಗೆ ಸುಮೊಟೋ ಕೇಸು ದಾಖಲಿಸುವ ಅವಕಾಶ ಇದೆ. ಅದನ್ನು ಮಾಡುತ್ತಾರೋ ಗೊತ್ತಿಲ್ಲ.

ಆತನಿಗೆ ಬೇರೆ ಮದುವೆಯಾಗಿತ್ತು !
ಯುವತಿಯನ್ನು ಆಸ್ಪತ್ರೆಗೆ ತಂದು ಬಿಟ್ಟುಹೋಗಿದ್ದ ಯುವಕ ಪ್ರಶಾಂತ್ ಕುಂದರ್ ಗೆ ಬೇರೆ ಮದುವೆಯಾಗಿತ್ತು. ಅಲ್ಲದೆ, ಉಪ್ಪೂರಿನಲ್ಲಿ ಪತ್ನಿಯ ಜೊತೆ ಬಾಡಿಗೆ ಮನೆ ಮಾಡಿಕೊಂಡಿದ್ದಾನೆ. ಉಡುಪಿಯಲ್ಲಿ ಫರ್ನಿಚರ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ.
ಮಾಡೆಲಿಂಗ್ ಹುಚ್ಚು ಕಟ್ಟಿಕೊಂಡಿದ್ದ ಹುಡುಗಿ
ಮಣಿಪಾಲದ ಖಾಸಗಿ ಕಾಲೇಜು ಒಂದರಲ್ಲಿ ಬಿಕಾಂ ಕಲಿಯುತ್ತಿದ್ದ ರಕ್ಷಿತಾ ನಾಯಕ್, ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ಟಿವ್ ಆಗಿದ್ದಳು. ಅದರಲ್ಲೂ ಇನ್ ಸ್ಟಾ ಗ್ರಾಮಿನಲ್ಲಿ ತನ್ನ ಥರಾವರಿ ಫೋಟೋಗಳನ್ನು ಹಾಕ್ಕೊಂಡು ಭಾರೀ ಫಾಲೋವರ್ಸ್ ಗಳಿಸಿದ್ದರು. ಆಕೆಯ ಹುಚ್ಚು ನೋಡಿ 40 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಗಳಾಗಿದ್ದರಂತೆ. ಉಡುಪಿಯಿಂದ 15 ಕಿಮೀ ದೂರದಲ್ಲಿರುವ ಹಿರಿಯಡ್ಕ ಬಳಿಯ ಕುಕ್ಕೆಹಳ್ಳಿ ಗ್ರಾಮದ ನಿವಾಸಿಯಾಗಿರುವ ರಕ್ಷಿತಾಳದ್ದು ತೀರಾ ಮಧ್ಯಮ ವರ್ಗದ ಕುಟುಂಬ. ಆದರೆ, ಒಂದೂವರೆ ವರ್ಷದಿಂದ ಉಡುಪಿಯಲ್ಲಿ ರೂಂ ಮಾಡಿಕೊಂಡಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು ಎನ್ನಲಾಗಿದೆ. ತಾನು ಮಾಡೆಲ್ ಆಗ್ತೀನಿ ಎಂದು ಹುಚ್ಚು ಕಟ್ಟಿಕೊಂಡಿದ್ದ ರಕ್ಷಿತಾ ಜಾಲತಾಣದಲ್ಲಿ ಅರ್ಧಂಬರ್ಧ ತೋಳಿನ ಅಂಗಿಗಳನ್ನು ಧರಿಸಿ, ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದಳು. ಇದು ಮನೆಯವರಿಗೆ ಇಷ್ಟವಾಗುತ್ತಿರಲಿಲ್ಲ.



ಅಂತೆ ಕಂತೆಗಳಿಗೆ ಉತ್ತರ ಬೇಕಲ್ಲ ?
ಈ ನಡುವೆ, ಪ್ರಶಾಂತ್ ಕುಂದರ್ ಮತ್ತು ರಕ್ಷಿತಾ ನಡುವೆ ಪರಿಚಯ ಆಗಿದ್ದು ಸಂಬಂಧ ಬೆಳೆದಿದೆ ಎನ್ನಲಾಗುತ್ತಿದೆ. ಉಡುಪಿಯ ಅಂಬಾಗಿಲಿನಲ್ಲಿ ರೂಂ ಮಾಡಿಕೊಂಡಿದ್ದ ರಕ್ಷಿತಾ ಮನೆಗೆ ಬಂದು ಹೋಗುತ್ತಿದ್ದ. ಆದರೆ, ಇತ್ತೀಚೆಗೆ ಗಂಡನ ಸಂಬಂಧದ ವಿಚಾರ ಅರಿತ ಪ್ರಶಾಂತ್ ಪತ್ನಿ, ರಕ್ಷಿತಾಳಿಗೆ ಫೋನ್ ಮಾಡಿ ದಬಾಯಿಸಿದ್ದಾಳೆ. ಹೀಗಾಗಿ ನೊಂದುಕೊಂಡಿದ್ದ ಹುಡುಗಿ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಯುವತಿಯ ಕುತ್ತಿಗೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಲೆಗಳಿದ್ದುದರಿಂದ ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಕಾರಣ ತಿಳಿಯಬಹುದಷ್ಟೆ. ಆದರೆ, ಒಟ್ಟು ವೃತ್ತಾಂತವನ್ನು ಪ್ರಶಾಂತ್ ಕುಂದರ್ ಒಬ್ಬನೇ ಹೇಳಬೇಕಷ್ಟೆ..
            
            
            A young woman Rakshitha Nayak died under suspicious circumstances in a private hospital in Udupi. The man who was absconding Prashanth Kunder has been arrested by Udupi police.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm