ಬ್ರೇಕಿಂಗ್ ನ್ಯೂಸ್
14-04-23 10:19 pm Mangalore Correspondent ಕ್ರೈಂ
ಮಂಗಳೂರು, ಎ.14 : ನಗರದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಗೋರಿಗುಡ್ಡೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂಲತಃ ಬೀದರ್ ನಿವಾಸಿ ಪ್ರಜ್ವಲ್ ಫಿನೆಹೌಸ್ (26), ಕುಲಶೇಖರದಲ್ಲಿ ವಾಸಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿ, ಸಕಲೇಶಪುರ ಬೈಕರಪಳ್ಳಿ ನಿವಾಸಿ ಧ್ರುವ ಶೆಟ್ಟಿ (19) ಮತ್ತು ಕುಳಾಯಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶಿವಾನಿ (22) ಬಂಧಿತ ಆರೋಪಿಗಳು. ಆರೋಪಿಗಳಿಂದ 1.40 ಲಕ್ಷ ರೂ. ಮೌಲ್ಯದ 5.4 ಕಿಲೋ ಗಾಂಜಾ, 4 ಮೊಬೈಲ್, 1 ಟ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ದಕ್ಷಿಣ ಠಾಣೆಯ ಪಿಎಸ್ಐ ಶೀತಲ್ ಅವರಿಗೆ ಬಂದ ಮಾಹಿತಿಯಂತೆ ಆರೋಪಿ ಪ್ರಜ್ವಲ್ ಫಿನೆಹೌಸ್ ನನ್ನು ದಸ್ತಗಿರಿ ಮಾಡಿದ್ದು ಆತನ ಮಾಹಿತಿಯಂತೆ ಉಳಿದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಜ್ವಲ್ ಮಹಾರಾಷ್ಟ್ರದಿಂದ ಗಾಂಜಾವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಹಾಗೂ ಶಿವಾನಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಪ್ರಜ್ವಲ್ ವಿರುದ್ದ 2021ರಲ್ಲಿ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಮತ್ತು ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ದ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The south station police and the CCB unit conducted a joint operation resulting in the arrest of three ganja peddlers, including a girl who is a medical student.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm