ಬ್ರೇಕಿಂಗ್ ನ್ಯೂಸ್
14-04-23 10:19 pm Mangalore Correspondent ಕ್ರೈಂ
ಮಂಗಳೂರು, ಎ.14 : ನಗರದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಗೋರಿಗುಡ್ಡೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂಲತಃ ಬೀದರ್ ನಿವಾಸಿ ಪ್ರಜ್ವಲ್ ಫಿನೆಹೌಸ್ (26), ಕುಲಶೇಖರದಲ್ಲಿ ವಾಸಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿ, ಸಕಲೇಶಪುರ ಬೈಕರಪಳ್ಳಿ ನಿವಾಸಿ ಧ್ರುವ ಶೆಟ್ಟಿ (19) ಮತ್ತು ಕುಳಾಯಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶಿವಾನಿ (22) ಬಂಧಿತ ಆರೋಪಿಗಳು. ಆರೋಪಿಗಳಿಂದ 1.40 ಲಕ್ಷ ರೂ. ಮೌಲ್ಯದ 5.4 ಕಿಲೋ ಗಾಂಜಾ, 4 ಮೊಬೈಲ್, 1 ಟ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ದಕ್ಷಿಣ ಠಾಣೆಯ ಪಿಎಸ್ಐ ಶೀತಲ್ ಅವರಿಗೆ ಬಂದ ಮಾಹಿತಿಯಂತೆ ಆರೋಪಿ ಪ್ರಜ್ವಲ್ ಫಿನೆಹೌಸ್ ನನ್ನು ದಸ್ತಗಿರಿ ಮಾಡಿದ್ದು ಆತನ ಮಾಹಿತಿಯಂತೆ ಉಳಿದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಜ್ವಲ್ ಮಹಾರಾಷ್ಟ್ರದಿಂದ ಗಾಂಜಾವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಹಾಗೂ ಶಿವಾನಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಪ್ರಜ್ವಲ್ ವಿರುದ್ದ 2021ರಲ್ಲಿ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಮತ್ತು ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ದ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The south station police and the CCB unit conducted a joint operation resulting in the arrest of three ganja peddlers, including a girl who is a medical student.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm