ಬ್ರೇಕಿಂಗ್ ನ್ಯೂಸ್
21-04-23 11:09 pm Mangalore Correspondent ಕ್ರೈಂ
ಮಂಗಳೂರು, ಎ.21: ದಿನದಿಂದ ದಿನಕ್ಕೆ ಆನ್ಲೈನ್ ಮೋಸಕ್ಕೆ ಒಳಗಾಗುವುದು ಹೆಚ್ಚುತ್ತಿದೆ. ಬುದ್ಧಿವಂತರು ಹೆಚ್ಚಿದ್ದಾರೆ ಎನ್ನಲಾಗುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಳೆದೊಂದು ವಾರದಲ್ಲಿ ಮತ್ತೆ ಆರು ಸೈಬರ್ ಫ್ರಾಡ್ ಪ್ರಕರಣಗಳು ದಾಖಲಾಗಿವೆ.
ಇನ್ ಸ್ಟಾ ಗ್ರಾಮ್ ಖಾತೆಯಲ್ಲಿ ನಕಲಿ ಖಾತೆದಾರ ಮೆಸೇಜ್ ನಂಬಿ 90 ಸಾವಿರ ರೂ. ಕಳಿಸಿ ಹಣ ಕಳಕೊಂಡ ಪ್ರಸಂಗ ನಡೆದಿದೆ. ವ್ಯಕ್ತಿಯೊಬ್ಬ ಇನ್ ಸ್ಟಾ ಗ್ರಾಮ್ ಬಳಕೆ ಮಾಡುತ್ತಿದ್ದಾಗ ಗೆಳೆಯನ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ನಿಮ್ಮ ಇನ್ ಸ್ಟಾ ಗ್ರಾಮ್ ವ್ಯಾಲೆಟ್ ಖಾತೆಗೆ 4.16 ಲಕ್ಷ ರೂ. ಹಣ ಬಂದಿದೆ, ಚೆಕ್ ಮಾಡಿ ಎಂದು ಮೆಸೇಜ್ ಬಂದಿತ್ತು. ಏನೋ ಪ್ರೈಸ್ ಬಂದಿದೆ ಎಂದೆಣಿಸಿಕೊಂಡ ವ್ಯಕ್ತಿ, ಕೂಡಲೇ ಮೆಸೇಜ್ ಚೆಕ್ ಮಾಡಿದ್ದರು. ಲಿಜ್ಜೀ ಹೂಪರ್ ಖಾತೆಯಿಂದ ಮೆಸೇಜ್ ಬಂದಿತ್ತು. ಗೆಳೆಯನೇ ಸೂಚಿಸಿ, ಮೆಸೇಜ್ ಬಂದಿದ್ದರಿಂದ ಈತನೂ ನಂಬಿದ್ದ. ಬಳಿಕ ವ್ಯಾಲೆಟ್ ಪಿನ್ ವೆರಿಫೈ ಶುಲ್ಕದ ಹೆಸರಲ್ಲಿ ಹಣ ಕಳಿಸುವಂತೆ ಆ ಕಡೆಯಿಂದ ಮೆಸೇಜ್ ಬಂದಿತ್ತು. ಇದನ್ನು ನಂಬಿದ ವ್ಯಕ್ತಿ ಎ.12ರಂದು 40 ಸಾವಿರ, 13ರಂದು ಮತ್ತೆ 50 ಸಾವಿರ ಹಣವನ್ನು ಕಳಿಸಿದ್ದರು.
ಆಬಳಿಕ ಮತ್ತೆ 70 ಸಾವಿರ ಹಣ ಕಳಿಸುವಂತೆ ಮರುದಿನ ಮೆಸೇಜ್ ಬಂದಿದ್ದನ್ನು ನೋಡಿ ಏನೋ ಎಡವಟ್ಟು ಆಗಿದೆಯೆಂದು ಹೇಳಿ ಗೆಳೆಯನಿಗೆ ಫೋನ್ ಮಾಡಿದ್ದರು. ಅಷ್ಟರಲ್ಲಿ ತನ್ನ ಖಾತೆ ಆರು ತಿಂಗಳಿಂದ ಹ್ಯಾಕ್ ಆಗಿರುವುದನ್ನು ಅತ್ತ ಕಡೆಯಿಂದ ಹೇಳಿದ್ದು, ಈ ವ್ಯಕ್ತಿ ಶಾಕ್ ಆಗಿದ್ದಾರೆ. ಈ ಬಗ್ಗೆ ಸೈಬರ್ ಪೊಲೀಸರಿಗೆ ವ್ಯಕ್ತಿ ದೂರು ನೀಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಎನಿ ಡೆಸ್ಕ್ ಏಪ್ ಡೌನ್ಲೋಡ್ ಮಾಡುವಂತೆ ಹೇಳಿ 83,999 ರೂಪಾಯಿ ಹಣ ಪೀಕಿಸಿಕೊಂಡ ಪ್ರಸಂಗ ನಡೆದಿದ್ದು, ವ್ಯಕ್ತಿ ನಿಂತಲ್ಲೇ ಮೋಸ ಹೋಗಿದ್ದಾರೆ. ವ್ಯಕ್ತಿಯೊಬ್ಬರು ತನ್ನ ಕ್ರೆಡಿಟ್ ಕಾರ್ಡ್ ಬಗ್ಗೆ ಮಾಹಿತಿ ಪಡೆಯಲು ಕಸ್ಟಮರ್ ಕೇರ್ ನಂಬರಿಗೆಂದು ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಇದರ ಬೆನ್ನಲ್ಲೇ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿದ್ದು, ತನ್ನನ್ನು ಐಸಿಐಸಿಐ ಬ್ಯಾಂಕ್ ಪ್ರತಿನಿಧಿಯೆಂದು ಹೇಳಿಕೊಂಡಿದ್ದಾನೆ. ಅಲ್ಲದೆ, ಕ್ರೆಡಿಟ್ ಕಾರ್ಡ್ ಬಗ್ಗೆ ಕೇಳಿದಾಗ, ನೀವು ಏನಿ ಡೆಸ್ಕ್ ಏಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದ್ದ. ಅದರಲ್ಲಿ ಕ್ರೆಡಿಟ್ ಕಾರ್ಡ್ ಮಾಹಿತಿ ಎಲ್ಲ ಇರುವುದಾಗಿ ಹೇಳಿದ್ದ. ವ್ಯಕ್ತಿ ಅದರಂತೆ, ಎನಿ ಡೆಸ್ಕ್ ಏಪ್ ಅನ್ನು ಡೌನ್ಲೋಡ್ ಮಾಡಿದ್ದ. ಕೆಲವೇ ಹೊತ್ತಿನಲ್ಲಿ ವ್ಯಕ್ತಿಯ ಐಓಬಿ ಬ್ಯಾಂಕಿನ ಖಾತೆಯಿಂದ ವಿವಿಧ ಹಂತಗಳಲ್ಲಿ 83,999 ರೂಪಾಯಿ ಹಣ ಖೋತಾ ಆಗಿತ್ತು.
ಮತ್ತೊಂದು ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಪಾರ್ಟ್ ಟೈಮ್ ಕೆಲಸ ಇದೆಯೆಂದು ನಂಬಿ ವಾಟ್ಸಪ್ ಮೆಸೇಜಿಗೆ ಉತ್ತರಿಸಲು ಹೋಗಿ ಬರೋಬ್ಬರಿ 5.66 ಲಕ್ಷ ರೂಪಾಯಿ ಹಣ ಕಳಕೊಂಡಿದ್ದಾನೆ. ಕಳೆದ ಫೆಬ್ರವರಿ ತಿಂಗಳಲ್ಲಿ ವ್ಯಕ್ತಿಗೆ ವಾಟ್ಸಪ್ ನಲ್ಲಿ ಬಿಐಟಿ ಪ್ರೈವೇಟ್ ಕಂಪನಿಯಲ್ಲಿ ಪಾರ್ಟ್ ಟೈಮ್ ಜಾಬ್ ಇದೆಯೆಂದು ಮೆಸೇಜ್ ಬಂದಿತ್ತು. ಅದಕ್ಕೆ ಪ್ರತಿಕ್ರಿಯಿಸಿದ್ದ ವ್ಯಕ್ತಿಗೆ ಆ ಕಡೆಯಿಂದ ಫೋನ್ ನಂಬರ್ ಬಂದಿತ್ತು. ಅದಕ್ಕೆ ಫೋನ್ ಮಾಡಿದ್ದ ವ್ಯಕ್ತಿಗೆ, ಆ ಕಡೆಯಿಂದ ಟಾಸ್ಕ್ ನೀಡಲಾಗಿತ್ತು. ವ್ಯಕ್ತಿ ಟಾಸ್ಕ್ ಕಂಪ್ಲೀಟ್ ಮಾಡಿದ್ದಲ್ಲದೆ, ಅದರ ಶುಲ್ಕವಾಗಿ ಮೊದಲಿಗೆ 232 ರೂ., ಆನಂತರ 2232 ರೂ. ಕಳಿಸುವಂತೆ ಮೆಸೇಜ್ ಬಂದಿತ್ತು. ಆನಂತರ ಫೆಬ್ರವರಿ 4ರಿಂದ ಮಾರ್ಚ್ 10ರ ವರೆಗೆ 5,66,664 ರೂಪಾಯಿ ಅನ್ನು ವಿವಿಧ ಹಂತಗಳಲ್ಲಿ ನಾನಾ ತರದ ಶುಲ್ಕದ ರೂಪದಲ್ಲಿ ಕಟ್ಟಿದ್ದ. ಇನ್ನಷ್ಟು ಹಣಕ್ಕೆ ಬೇಡಿಕೆ ಇಡುತ್ತಲೇ ಇದ್ದಾಗ ವ್ಯಕ್ತಿ ಮೋಸ ಹೋಗಿರುವುದು ಅರಿವಾಗಿದ್ದು, ಪೊಲೀಸರ ಬಳಿಗೆ ಬಂದಿದ್ದಾನೆ.
ನಾಲ್ಕನೇ ಪ್ರಕರಣದಲ್ಲಿ ವ್ಯಕ್ತಿಯೊಬ್ಬ 15 ಸಾವಿರ ಮೌಲ್ಯದ ಉತ್ತಮ ಗುಣಮಟ್ಟದ ಮೊಬೈಲ್ ಖರೀದಿಸಲು ಹೋಗಿ 1.36 ಲಕ್ಷ ರೂಪಾಯಿ ಕಳಕೊಂಡಿದ್ದಾನೆ. ಫೇಸ್ಬುಕ್ ನಲ್ಲಿ ಐಫೋನ್ ಮೊಬೈಲ್ ಕುರಿತ ವಿಡಿಯೋ ಒಂದನ್ನು ನೋಡಿ ಲೈಕ್ ಕೊಟ್ಟಿದ್ದ. ಕೂಡಲೇ ಅತ್ತ ಕಡೆಯಿಂದ ಈತನ ಮೊಬೈಲಿಗೆ ಸಂದೇಶ ಬಂದಿತ್ತು. ಅದೇ ಮೊಬೈಲ್ ಕೇವಲ 15 ಸಾವಿರಕ್ಕೆ ಸಿಗುತ್ತದೆ, ಬೇಕಾದ್ರೆ ವಿಚಾರಿಸಿ ಎಂದಿತ್ತು. ಅಲ್ಲದೆ, ಗೂಗಲ್ ಪೇ ನಂಬರ್ ಕಳಿಸಿ ಹಣ ಕಳಿಸಿದರೆ ಮೊಬೈಲ್ ತಲುಪಿಸಲಾಗುವುದು ಎಂದು ಸಂದೇಶ ಕಳಿಸಿದ್ದರು. ಇದನ್ನು ನಂಬಿದ ವ್ಯಕ್ತಿ ಬೇರೆ ಬೇರೆ ಚಾರ್ಜ್ ಹೆಸರಲ್ಲಿ ಬರೋಬ್ಬರಿ 1.36 ಲಕ್ಷ ರೂಪಾಯಿ ಕಳಿಸಿಕೊಟ್ಟಿದ್ದಾನೆ. ಆದರೆ, ಅತ್ತ ಕಡೆಯಿಂದ ಮೊಬೈಲಂತೂ ಬಂದಿಲ್ಲ.
5ನೇ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಆನ್ಲೈನ್ ಟೆಲಿಗ್ರಾಮ್ ಟ್ರೇಡಿಂಗ್ ಏಪ್ ಗೆ ಹೂಡಿಕೆ ಮಾಡುವ ನೆಪದಲ್ಲಿ ಬರೋಬ್ಬರಿ 4.20 ಲಕ್ಷ ರೂಪಾಯಿ ಕಳಿಸಿಕೊಟ್ಟು ಮೋಸ ಹೋಗಿದ್ದಾನೆ. ಈ ಬಗ್ಗೆ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore sees increase in Online fraudsters, job fraud credit card fraud reported. Six people were deceived to the tune of lac of rupees by online fraudsters in and around the city.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm