ಬ್ರೇಕಿಂಗ್ ನ್ಯೂಸ್
26-04-23 12:27 pm Bangalore Correspondent ಕ್ರೈಂ
ಬೆಂಗಳೂರು, ಎ.26: ಲೈಂಗಿಕ ಕಿರುಕುಳ ನೀಡುತ್ತಿದ್ದ ರ್ಯಾಪಿಡೊ ಚಾಲಕನಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆರ್ಕಿಟೆಕ್ಚರ್ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏ. 21ರಂದು ರಾತ್ರಿ 11.30ರ ಸುಮಾರಿನಲ್ಲಿ ಆನ್ಲೈನ್ ಆಯಪ್ ಮೂಲಕ ರ್ಯಾಪಿಡೊ ಬೈಕ್ ಅನ್ನು ಬುಕ್ ಮಾಡಿದ್ದಳು. ನಿಗದಿತ ಸ್ಥಳಕ್ಕೆ ಬಂದ ರ್ಯಾಪಿಡೊ ಬೈಕ್ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದು, ಅಲ್ಲಿಂದ ಇಂದಿರಾನಗರಕ್ಕೆ ಬೈಕ್ ತೆರಳಬೇಕಿತ್ತು. ಆದರೆ, ಆತ ಅಲ್ಲಿಗೆ ಕರೆದೊಯ್ಯದೆ ಒಟಿಪಿ ಪರಿಶೀಲಿಸುವ ನೆಪದಲ್ಲಿ ಆಕೆಯ ಫೋನ್ ತೆಗೆದುಕೊಂಡು ದೊಡ್ಡಬಳ್ಳಾಪುರಕ್ಕೆ ಹೋಗಲು ಯತ್ನಿಸಿದ್ದಾನೆ. ಬೈಕ್ ನಿಗದಿತ ಸ್ಥಳಕ್ಕೆ ಹೋಗದೆ ಇರುವುದನ್ನು ಗಮನಿಸಿದ ಯುವತಿ ಕೂಡಲೇ ಚಾಲಕನನ್ನು ಪ್ರಶ್ನಿಸಿದ್ದಾಳೆ. ಆದರೆ ಇದ್ಯಾವುದಕ್ಕೂ ಉತ್ತರಿಸದ ಆತ ಬೈಕ್ ವೇಗವನ್ನು ಹೆಚ್ಚಿಸಲು ಮುಂದಾಗಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಕೂಡಲೇ ಆತನ ಬಳಿಯಿದ್ದ ತನ್ನ ಫೋನ್ನನ್ನು ಕಸಿದುಕೊಂಡು, ಗಾಡಿ ನಿಲ್ಲಿಸುವಂತೆ ಹೇಳಿದ್ದಾಳೆ.
ಚಾಲಕ ಗಾಡಿ ನಿಲ್ಲಿಸದೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಆತನಿಂದ ರಕ್ಷಿಸಿಕೊಳ್ಳಲು ಬಿಎಂಎಸ್ ಕಾಲೇಜು ಸಮೀಪ ಚಲಿಸುತ್ತಿದ್ದಾಗಲೇ ರಾಪಿಡೊ ಬೈಕಿನಿಂದ ಜಿಗಿದಿದ್ದಾಳೆ.
ತನಗಾದ ಕರಾಳ ಅನುಭವವನ್ನು ಯುವತಿ ಪೊಲೀಸ್ ದೂರಿನಲ್ಲಿ ಹಂಚಿಕೊಂಡಿದ್ದು, ಈ ಸಂಬಂಧ ರ್ಯಾಪಿಡೋ ಸಂಸ್ಥೆಗೂ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದು, ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್ ದಾಖಲು ಮಾಡಿ ತನಿಖೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A 30-year-old Bengaluru woman resorted to jumping off a moving Rapido motorcycle after the driver groped her, snatched her phone, and tried to take her to a different destination.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm