ಬ್ರೇಕಿಂಗ್ ನ್ಯೂಸ್
26-04-23 12:27 pm Bangalore Correspondent ಕ್ರೈಂ
ಬೆಂಗಳೂರು, ಎ.26: ಲೈಂಗಿಕ ಕಿರುಕುಳ ನೀಡುತ್ತಿದ್ದ ರ್ಯಾಪಿಡೊ ಚಾಲಕನಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆರ್ಕಿಟೆಕ್ಚರ್ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏ. 21ರಂದು ರಾತ್ರಿ 11.30ರ ಸುಮಾರಿನಲ್ಲಿ ಆನ್ಲೈನ್ ಆಯಪ್ ಮೂಲಕ ರ್ಯಾಪಿಡೊ ಬೈಕ್ ಅನ್ನು ಬುಕ್ ಮಾಡಿದ್ದಳು. ನಿಗದಿತ ಸ್ಥಳಕ್ಕೆ ಬಂದ ರ್ಯಾಪಿಡೊ ಬೈಕ್ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದು, ಅಲ್ಲಿಂದ ಇಂದಿರಾನಗರಕ್ಕೆ ಬೈಕ್ ತೆರಳಬೇಕಿತ್ತು. ಆದರೆ, ಆತ ಅಲ್ಲಿಗೆ ಕರೆದೊಯ್ಯದೆ ಒಟಿಪಿ ಪರಿಶೀಲಿಸುವ ನೆಪದಲ್ಲಿ ಆಕೆಯ ಫೋನ್ ತೆಗೆದುಕೊಂಡು ದೊಡ್ಡಬಳ್ಳಾಪುರಕ್ಕೆ ಹೋಗಲು ಯತ್ನಿಸಿದ್ದಾನೆ. ಬೈಕ್ ನಿಗದಿತ ಸ್ಥಳಕ್ಕೆ ಹೋಗದೆ ಇರುವುದನ್ನು ಗಮನಿಸಿದ ಯುವತಿ ಕೂಡಲೇ ಚಾಲಕನನ್ನು ಪ್ರಶ್ನಿಸಿದ್ದಾಳೆ. ಆದರೆ ಇದ್ಯಾವುದಕ್ಕೂ ಉತ್ತರಿಸದ ಆತ ಬೈಕ್ ವೇಗವನ್ನು ಹೆಚ್ಚಿಸಲು ಮುಂದಾಗಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಕೂಡಲೇ ಆತನ ಬಳಿಯಿದ್ದ ತನ್ನ ಫೋನ್ನನ್ನು ಕಸಿದುಕೊಂಡು, ಗಾಡಿ ನಿಲ್ಲಿಸುವಂತೆ ಹೇಳಿದ್ದಾಳೆ.
ಚಾಲಕ ಗಾಡಿ ನಿಲ್ಲಿಸದೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಆತನಿಂದ ರಕ್ಷಿಸಿಕೊಳ್ಳಲು ಬಿಎಂಎಸ್ ಕಾಲೇಜು ಸಮೀಪ ಚಲಿಸುತ್ತಿದ್ದಾಗಲೇ ರಾಪಿಡೊ ಬೈಕಿನಿಂದ ಜಿಗಿದಿದ್ದಾಳೆ.
ತನಗಾದ ಕರಾಳ ಅನುಭವವನ್ನು ಯುವತಿ ಪೊಲೀಸ್ ದೂರಿನಲ್ಲಿ ಹಂಚಿಕೊಂಡಿದ್ದು, ಈ ಸಂಬಂಧ ರ್ಯಾಪಿಡೋ ಸಂಸ್ಥೆಗೂ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದು, ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್ ದಾಖಲು ಮಾಡಿ ತನಿಖೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A 30-year-old Bengaluru woman resorted to jumping off a moving Rapido motorcycle after the driver groped her, snatched her phone, and tried to take her to a different destination.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm