ಬ್ರೇಕಿಂಗ್ ನ್ಯೂಸ್
11-05-23 01:22 pm HK News Desk ಕ್ರೈಂ
ಕೊಲ್ಲಂ, ಮೇ 11: ತನಗೆ ಚಿಕಿತ್ಸೆ ನೀಡುತ್ತಿದ್ದ ಮಹಿಳಾ ವೈದ್ಯರನ್ನು ವ್ಯಕ್ತಿಯೊಬ್ಬ ಇರಿದು ಕೊಂದ ಭಯಾನಕ ಘಟನೆ ಕೇರಳದಲ್ಲಿ ನಡೆದಿದೆ. ಕೊಲ್ಲಂ ಜಿಲ್ಲೆಯ ಕೊಟ್ಟರಕ್ಕಾರದಲ್ಲಿನ ತಾಲೂಕು ಆಸ್ಪತ್ರೆಯಲ್ಲಿ 22 ವರ್ಷದ ವೈದ್ಯೆಯನ್ನು ಕುಡುಕ ರೋಗಿಯೊಬ್ಬ ಬುಧವಾರ ಕೊಲೆ ಮಾಡಿದ್ದಾನೆ. ಈ ವ್ಯಕ್ತಿ ತನ್ನ ಕುಟುಂಬದ ಸದಸ್ಯರ ಜತೆ ಕಿತ್ತಾಡಿಕೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಕೇರಳದ ವೈದ್ಯಕೀಯ ವೃತ್ತಿಪರರಲ್ಲಿ ಆಕ್ರೋಶ ಉಂಟುಮಾಡಿದೆ. ಕೊಟ್ಟರಕ್ಕಾರದಲ್ಲಿ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಬುಧವಾರ ಮುಂಜಾನೆ ಈ ಭಯಾನಕ ಘಟನೆ ನಡೆದಿದ್ದು, ಸಾವಿಗೀಡಾದ ವೈದ್ಯೆಯನ್ನು ವಂದನಾ ದಾಸ್ ಎಂದು ಗುರುತಿಸಲಾಗಿದೆ. ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಾಸ್ ಅವರು, ಕೆಲವು ಗಂಟೆಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
/newsdrum-in/media/media_files/1tvlhYpnAIJx3hBByEw3.jpg)
ದಾಳಿ ನಡೆಸಿದ ಕುಡುಕ, 42 ವರ್ಷದ ಸಂದೀಪ್, ಕುಟುಂಬದ ಸದಸ್ಯರ ಜತೆ ಜಗಳವಾಡುತ್ತಿದ್ದ. ಈ ವೇಳೆ ಆತನ ಕಾಲಿಗೆ ಗಾಯವಾಗಿತ್ತು. ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಸಂದೀಪ್ಗೆ ವಂದನಾ ದಾಸ್ ಅವರು ಬ್ಯಾಂಡೇಜ್ ಸುತ್ತುತ್ತಿದ್ದರು. ಇದ್ದಕ್ಕಿದ್ದಂತೆ ಕೆರಳಿದ ಆತ ಕತ್ತರಿ ಮತ್ತು ಚಿಕ್ಕ ಚಾಕು ತೆಗೆದುಕೊಂಡು ಅಲ್ಲಿ ನಿಂತಿದ್ದ ಎಲ್ಲರ ಮೇಲೆಯೂ ದಾಳಿ ನಡೆಸಿದ್ದಾನೆ.
ದಿಢೀರ್ ದಾಳಿಯಿಂದ ಯುವ ವೈದ್ಯೆಗೆ ಗಂಭೀರ ಗಾಯವಾಯಿತು. ಆಕೆಯ ಪಕ್ಕದಲ್ಲಿ ಇದ್ದ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ವೈದ್ಯೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಕೆಯ ಜೀವ ಉಳಿಸುವುದು ಸಾಧ್ಯವಾಗಿಲ್ಲ.

ಹಲ್ಲೆಕೋರ ಸಂದೀಪ್ ಪುಯಪಳ್ಳಿ ಚೆರುಕಾರಕೋಣಂನ ನಿವಾಸಿಯಾಗಿದ್ದು, ವೃತ್ತಿಯಿಂದ ಶಿಕ್ಷಕನಾಗಿದ್ದ ಆತನನ್ನು ಇತ್ತೀಚೆಗೆ ಅಮಾನತುಗೊಳಿಸಲಾಗಿತ್ತು. ಕುಟುಂಬದ ಸದಸ್ಯರ ಜತೆ ಜಗಳವಾಡಿದ್ದ ಸಂದೀಪ್, ತನ್ನನ್ನು ಕಾಪಾಡುವಂತೆ ಸ್ವತಃ ತಾನೇ ಪೊಲೀಸರಿಗೆ ಕರೆ ಮಾಡಿದ್ದ. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಆತನ ಕಾಲಿಗೆ ಗಾಯವಾಗಿರುವುದು ಕಂಡುಬಂದಿತ್ತು. ಆತನನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.
ಆತ ಮದ್ಯ ಸೇವನೆ ಮಾಡಿದ್ದ. ಆಸ್ಪತ್ರೆಗೆ ಕರೆ ತರುವಾಗ ಉದ್ರಿಕ್ತನಾಗಿ ವರ್ತಿಸುತ್ತಿದ್ದ. ರೋಗಿಯ ಗಾಯಕ್ಕೆ ಚಿಕಿತ್ಸೆ ನೀಡುವಾಗ ಕೊಠಡಿ ಒಳಗೆ ನಮಗೆ ಪ್ರವೇಶ ಇಲ್ಲದ ಕಾರಣ, ಆತನ ಜತೆ ವೈದ್ಯೆ ಮಾತ್ರ ಇದ್ದರು" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಇದ್ದಕ್ಕಿದ್ದಂತೆ ಅಲ್ಲಿ ಗದ್ದಲ ಶುರುವಾಗಿತ್ತು. ವೈದ್ಯೆಯು ಸಹಾಯಕ್ಕಾಗಿ ಕಿರುಚುತ್ತಾ ಹೊರಗೆ ಓಡಿ ಬಂದರು. ಕತ್ತರಿ ಮತ್ತು ಚೂರಿ ಹಿಡಿದ
ಪೊಲೀಸ್ ಸಿಬ್ಬಂದಿ ಆತನನ್ನು ತಡೆಯಲು ಪ್ರಯತ್ನಿಸಿದಾಗ ಅವರ ಮೇಲೆ ಕೂಡ ದಾಳಿ ನಡೆಸಿದ್ದಾನೆ. ವೈದ್ಯೆ ಅಲ್ಲದೆ, ಇನ್ನೂ ನಾಲ್ಕು ಜನರಿಗೆ ಗಾಯಗಳಾಗಿವೆ. ಕುಡಿದ ಮತ್ತಿನಲ್ಲಿದ್ದ ಆತ ಆಸ್ಪತ್ರೆಯ ಅನೇಕ ಕಡೆ ದಾಂದಲೆ ನಡೆಸಿದ್ದಾನೆ. ಆತನನ್ನು ಬಹಳ ಕಷ್ಟಪಟ್ಟು ಹಿಡಿದು, ವಶಕ್ಕೆ ಪಡೆದುಕೊಳ್ಳಲಾಗಿದೆ.
A 23-year-old doctor was stabbed to death on Wednesday at a hospital in Kottarakkara area of Kollam district in Kerala allegedly by a man, a school teacher under suspension, who was brought there by police after being involved in a fight with his family members.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm