ಬ್ರೇಕಿಂಗ್ ನ್ಯೂಸ್
30-05-23 05:24 pm Bangalore Correspondent ಕ್ರೈಂ
ಬೆಂಗಳೂರು, ಮೇ 30: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಮಹಿಳೆಯೊಬ್ಬರು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ವಿಜಯಶಂಕರ ಆರ್ಯಗೆ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ ಜ್ಯೋತಿ ದೊಡ್ಡಮನಿ ಎನ್ನುವ ಮಹಿಳೆಯ ಪರಿಚಯವಾಗಿದೆ. ಬಳಿಕ ಇಬ್ಬರ ಮಧ್ಯೆ ಪ್ರೀತಿ ಉಂಟಾಗಿತ್ತು.

ಇದೀಗ ವಿಜಯ್ ಜ್ಯೀತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಕುಪಿತಗೊಂಡ ಜ್ಯೋತಿ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರೂಮಿಗೆ ಕರೆಸಿಕೊಂಡು ಬಿಸಿ ನೀರು ಎರಚಿದ್ದಾಳೆ. ಇದರಿಂದ ಪ್ರಿಯಕರ ವಿಜಯಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಜ್ಯೋತಿ ಬೃಂದಾವನ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಳು. ಸುಮಾರು 4 ವರ್ಷದ ಹಿಂದೆ ಇಬ್ಬರ ಪರಿಚಯವಾಗಿದ್ದು, ಜ್ಯೋತಿ ಮದುವೆ ಆಗಿರುವುದನ್ನು ಮುಚ್ಚಿಟ್ಟಿದ್ದಳು. ಹೀಗೆ ಇಬ್ಬರ ನಡುವೆ ಲವ್ವಿ ಡವ್ವಿ ಮುಂದುವರೆದಿದ್ದು, 2 ವರ್ಷಗಳ ಹಿಂದೆ ಜ್ಯೋತಿಗೆ ಮದುವೆಯಾಗಿರುವ ವಿಚಾರ ವಿಜಯ್ಗೆ ತಿಳಿದು ಬಂದಿದೆ.
ಆದರೆ ಈ ನಡುವೆ ಬೇರೆ ಯುವತಿಯೊಂದಿಗೆ ಭೀಮಾಶಂಕರನಿಗೆ ಮದುವೆ ನಿಶ್ಚಯವಾಗಿತ್ತು. ಮದುವೆಯಾದ ಬಳಿಕ ಭೀಮಾಶಂಕರ ಮತ್ತೆ ಬೆಂಗಳೂರಿಗೆ ಬಂದಿದ್ದ. ಈ ವಿಚಾರ ತಿಳಿದ ಮಹಿಳೆ ಮೇ 25 ರಂದು ಮಾತನಾಡಬೇಕು ಎಂದು ಭೀಮಾಶಂಕರನನ್ನ ರೂಮಿಗೆ ಕರೆದಿದ್ದಾಳೆ. ಸಂಜೆ ಏಳು ಗಂಟೆ ಸುಮಾರಿಗೆ ರೂಮಿಗೆ ಬಂದಿದ್ದ ಭೀಮಾಶಂಕರ ಈ ವೇಳೆ ಮದುವೆಯಾದ ವಿಚಾರ ಪ್ರಸ್ತಾಪಿಸಿದ್ದ. ಇದರಿಂದ ಕುಪಿತಗೊಂಡ ಮಹಿಳೆ ಏಕಾಏಕಿ ಬಿಸಿ ನೀರು ಕಾಯಿಸಿ ತಂದು ಭೀಮಾಶಂಕರನ ಮುಖಕ್ಕೆ ಎರಚಿದ್ದಾಳೆ. ಸಾಲದೆಂಬಂತೆ ಬಿಯರ್ ಬಾಟಲ್ನಿಂದ ಮುಖಕ್ಕೆ ಹೊಡೆದು ಮನೆ ಲಾಕ್ ಮಾಡಿಕೊಂಡು ಕಾಲ್ಕಿತ್ತಿದ್ದಾಳೆ.
ತೀವ್ರ ಗಾಯಗೊಂಡ ಭೀಮಾಶಂಕರ ಕಿರುಚಾಡತೊಡಗಿದ್ದಾನೆ. ಈ ವೇಳೆ ಮನೆ ಮಾಲೀಕ ಸೈಯದ್ ಆಗಮಿಸಿ ಗಾಯಾಳುವನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಿಸಿ ನೀರು ಬಿದ್ದು ಶೇಕಡಾ 40-50 ರಷ್ಟು ಗಾಯಗಳಾಗಿವೆ ಎನ್ನಲಾಗಿದ್ದು, ಈ ಬಗ್ಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಭೀಮಾಶಂಕರ ದೂರು ದಾಖಲಿಸಿದ್ದಾನೆ. ದೂರು ಪಡೆದ ಪೊಲೀಸರು ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.
In a shocking incident, a woman tried to kill her recently married lover by pouring boiling water on him, causing him to sustain around 50 per cent burn injuries. The victim, Vijay Shankar Bheema Shankar Arya, known as Vijay Kumar, is a 30-year-old esident of Yarandahalli in Bommasandra. He is currently undergoing treatment at Victoria Hospital's burns ward.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm