ಬ್ರೇಕಿಂಗ್ ನ್ಯೂಸ್
01-06-23 09:39 pm HK News Desk ಕ್ರೈಂ
ದಾವಣಗೆರೆ, ಜೂನ್ 1: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.
ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35 ವರ್ಷದ ಅಮರ ಕಿತ್ತೂರು ಹತ್ಯೆ ಮಾಡಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.
ಅಮರ ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಜಯ ಲಕ್ಷ್ಮಿ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನ ಕೊಲ್ಲುವುದಾಗಿ ಪತ್ನಿಗೆ ಹೇಳಿ ಬೆದರಿಸಿದ್ದ. ಆದರೆ ಪತ್ನಿ ಮಾತ್ರ ಮರಳಿ ಬಂದಿರಲಿಲ್ಲ. ಮಕ್ಕಳು ಹೆಚ್ಚು ಹಠ ಮಾಡುತ್ತವೆ ಎಂದು ಮಕ್ಕಳನ್ನು ತನ್ನ ಕಾರಿನಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆರೋಪಿಯು ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಆನ್ ಮಾಡಿದಾಗ ಪತ್ನಿ ಕರೆ ಮಾಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿ ಸಂಪರ್ಕಿಸಿದ ನಂತರ ಆತನು ಮಕ್ಕಳ ಮೃತ ದೇಹಗಳೊಂದಿಗೆ ದಾವಣಗೆರೆಗೆ ಬಂದಿದ್ದಾನೆ. ವಿಷಯ ತಿಳಿದು ಅಮರ್ ಮೊಬೈಲ್ ಲೊಕೇಶನ್ ಆದಾರದ ಮೇಲೆ ಪತ್ತೆ ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inhumane incident took place in Davangere where a sinful father suffocated his twin children. The deceased children have been identified as four-year-old Advait and Anveet. The father, 35-year-old Amara Kittur, killed his children. Amara Kittur was originally a resident of Gokaka and lived with her family in Anjaneya Mill Barangay of Davangere city.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm